Homeಮುಖಪುಟಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

- Advertisement -
- Advertisement -

COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗಿನ ಮುಖಾಮುಖಿ ನಮ್ಮ ಹಾದಿಯಾಗಿಲ್ಲ. ಅದೇ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ”ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದಿ ಫೆಡರಲ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದಿರುವ ವಿಜಯನ್‌ರವರ ಸಂದರ್ಶನದ ಕೆಲವು ಆಯ್ದ ಭಾಗಗಳು ಇಲ್ಲಿವೆ.

ಕಳೆದ ಮೂರು ವರ್ಷಗಳಲ್ಲಿ, ನಿಮ್ಮ ಸರ್ಕಾರವು ಓಖಿ ಚಂಡಮಾರುತದಿಂದ COVID-19 ವರೆಗಿನ ಹಲವು ವಿಪತ್ತುಗಳನ್ನು ಎದುರಿಸಬೇಕಾಯಿತು. ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಸಮರ್ಥ ನಾಯಕನಾಗಿ ನಿಮ್ಮನ್ನು ನೋಡಲಾಗುತ್ತಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ?

ಇರುವ ಬಿಕ್ಕಟ್ಟಿನ ವಿರುದ್ಧ ಹೋರಾಡುವುದು ಮತ್ತು ಧೈರ್ಯದಿಂದ ಎದುರಿಸಿದರೆ ಮಾತ್ರ ನೀವು ಅದನ್ನು ಅವಕಾಶವಾಗಿ ಪರಿವರ್ತಿಸಬಹುದು. ಕೇರಳವು ಹಿಂದಿನಿಂದಲೂ ಆ ಕೆಲಸ ಮಾಡುತ್ತಿದ್ದು ನಾವು ಅದನ್ನು ಪುನಾರಾವರ್ತನೆ ಮಾಡಿದ್ದೇವೆ ಅಷ್ಟೇ. ಅಲ್ಲದೇ ನಾನೊಬ್ಬನೇ ಇದನ್ನು ಮಾಡಲಾಗುವುದಿಲ್ಲ. ಒಟ್ಟಾರೆ ಇಡೀ ಕೇರಳ ಸಮಾಜವಾಗಿ ನಾವು ಇದನ್ನು ಎದುರಿಸುತ್ತಿದ್ದೇವೆ.

ನಾವು 2017ರ ಓಖಿ ಚಂಡಮಾರುತ, ನಿಫಾ ವೈರಸ್‌, 2018-19ರ ನೆರೆ ಹಾವಳಿ ಮತ್ತು ಕೋವಿಡ್‌ ಎಲ್ಲವನ್ನು ಇಡೀ ಸಮಾಜವಾಗಿ ಎದುರಿಸಿದ್ದೇವೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ.

ಮುಖ್ಯಮಂತ್ರಿಯಾಗಿ ನಿಮಗೆ ಸಿಗುವ ಪುರಸ್ಕಾರಗಳ ನಡುವೆಯೂ ಗೃಹ ಇಲಾಖೆ ಮತ್ತು ಪೊಲೀಸರು ಈಗ ಸ್ವಲ್ಪ ಸಮಯದವರೆಗೆ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿ/ಆರ್‌ಎಸ್‌ಎಸ್ ಜನರು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ ಎಂಬ ಆರೋಪವಿದೆ. ನಿಮ್ಮ ಪಕ್ಷಬಿ ಯುಎಪಿಎಗೆ ವಿರುದ್ಧವಾಗಿದ್ದರೂ, ಈ ಕಾಯ್ದೆಯನ್ನು ಕೇರಳ ಪೊಲೀಸರು ಬಳಸಿದ ಉದಾಹರಣೆಗಳಿವೆ. ಕೇರಳ ಪೊಲೀಸರು ಬಲಪಂಥೀಯ ಪಡೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಏನು ಹೇಳುತ್ತೀರಿ?

ಯುಎಪಿಎ ಕುರಿತು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ತುಂಬಾ ಸ್ಪಷ್ಟವಾಗಿದೆ. ಯುಎಪಿಎ ಪ್ರಕರಣಗಳನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಆದಾಗ್ಯೂ, ಅಂತಹ ಸಂದರ್ಭಗಳಲ್ಲಿ ಕೇಂದ್ರ ಏಜೆನ್ಸಿಗಳು ನೇರವಾಗಿ ಮಧ್ಯಪ್ರವೇಶಿಸುವಂತಹ ಪರಿಸ್ಥಿತಿ ಇದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟಿನಡಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ. ಆದ್ದರಿಂದ, ಈ ವಿಷಯಗಳಲ್ಲಿ ತೊಡಗಿಸಿಕೊಳ್ಳುವವರ ರಾಜಕೀಯ ಸಂಬಂಧಕ್ಕಿಂತ ಕಾನೂನುಬದ್ಧತೆಯನ್ನು ನಾವು ಮಾನ್ಯ ಮಾಡುತ್ತೇವೆ. ಪೊಲೀಸರು ಮಾಡಿದ ಉತ್ತಮ ಕಾರ್ಯಗಳನ್ನು ಅಂಗೀಕರಿಸಲು ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸಲು ಸರ್ಕಾರ ಹಿಂಜರಿಯುವುದಿಲ್ಲ. ಇನ್ನು ಪೊಲೀಸರ ಕುರಿತಂತೆ ಉಳಿದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂಬುದು ನನ್ನ ಅಭಿಪ್ರಾಯ.

ನಿಮ್ಮ ರಾಜಕೀಯ ವಿರೋಧಿಗಳು ದೇಶವನ್ನು ಆಳುತ್ತಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಬಿಜೆಪಿ ಸರ್ಕಾರ ಚುಕ್ಕಾಣಿ ಹಿಡಿದಿದ್ದು, ಇದು ಯಾವ ರೀತಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ?

ಕೇಂದ್ರ-ರಾಜ್ಯ ಸಂಬಂಧದಲ್ಲಿ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. COVID-19 ವಿರುದ್ಧ ಹೋರಾಡುವಾಗ, ನಾವು ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಬದ್ಧರಾಗಿದ್ದೇವೆ.

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ರಾಜ್ಯದ ವಿರೋಧ ಪಕ್ಷ ಮತ್ತು ಅದರ ನಾಯಕರ ಸಹಕಾರದ ಕುರಿತು ನಿಮ್ಮ ಅಭಿಪ್ರಾಯವೇನು?

ರಾಜ್ಯದ ಉಳಿವು ಮತ್ತು ಭವಿಷ್ಯದ ವಿಷಯಗಳಿಗೆ ಸಂಬಂಧಿಸಿದಂತೆ, ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ನಂಬುತ್ತೇನೆ.

COVID-19 ಅನ್ನು ಕೇರಳ ನಿರ್ವಹಿಸುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಮತ್ತು ಹೆಚ್ಚು ಹೆಚ್ಚು ವ್ಯಾಖ್ಯಾನಕಾರರು ಇದನ್ನು ಜಗತ್ತಿಗೆ ಒಂದು ಮಾದರಿ ಎಂದು ಉಲ್ಲೇಖಿಸುತ್ತಿದ್ದಾರೆ. ನಿಫಾ ಬಿಕ್ಕಟ್ಟಿನ ಸಮಯದಲ್ಲಿಯೂ ಇದೇ ಸಂಭವಿಸಿದೆ. ನಿಮ್ಮ ‘ಯಶಸ್ಸಿನ ಮಂತ್ರ’ ಏನು?

ಯಶಸ್ಸಿಗೆ ಅಂತಹ ಯಾವುದೇ ಮಂತ್ರವಿಲ್ಲ. ನಾವು ಏನನ್ನಾದರೂ ಸಾಧಿಸಿದರೆ, ಅದರ ಸಂಪೂರ್ಣ ಮನ್ನಣೆ ಬಿಕ್ಕಟ್ಟನ್ನು ನಿವಾರಿಸಲು ಒಟ್ಟಾಗಿ ನಿಂತಿರುವ ಕೇರಳದ ಜನರಿಗೆ ಸಲ್ಲುತ್ತದೆ. ಅಂತಹ ಸೌಹಾರ್ದವು ನಮ್ಮ ಸಮಾಜದಲ್ಲಿ ಯಾವಾಗಲೂ ಇತ್ತು. ಕಠಿಣ ಕಾಲದಲ್ಲಿ ಇಂತಹ ಪ್ರಚಂಡ ಏಕತೆಯ ಪ್ರಜ್ಞೆಯನ್ನು ನಾವು ಪ್ರದರ್ಶಿಸಿದ್ದೇವೆ.

ಕೃಪೆ: ದಿ ಫೆಡರಲ್‌


ಇದನ್ನೂ ಓದಿ: ಕೊರೋನ ವಾರಿಯರ್ಸ್‌ಗಳೇ ರಿಯಲ್‌ ಹೀರೋಗಳು: ಅವರಿಗೆ ಹುಸಿ ಸಮ್ಮಾನಗಳು ಸಾಲವು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...