Homeಎಕಾನಮಿಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

ಸಹಕಾರಿ ಬ್ಯಾಂಕುಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಅವುಗಳ ಅಸ್ತಿತ್ವ ಮತ್ತು ಸಹಕಾರಿ ಗುಣವನ್ನು ರಕ್ಷಿಸಬೇಕು ಎಂದು ಕೋರಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ,

‘ಇತರೆ ಬ್ಯಾಂಕುಗಳಿಗಿಂತ ಸಹಕಾರಿ ಬ್ಯಾಂಕುಗಳು ಇಂದು ಕೆಟ್ಟ ಪರಿಸ್ಥಿತಿಯಲ್ಲಿದೆ. ಅವುಗಳನ್ನು ಖಾಸಗಿ ಘಟಕಗಳಾಗಿ ಪರಿವರ್ತಿಸುವುದರಿಂದ ವಂಚನೆಗಳು ಅಥವಾ ಅಕ್ರಮಗಳು ಕೊನೆಗೊಳ್ಳುತ್ತವೆ ಎಂಬ ಅಭಿಪ್ರಾಯ ಸರಿಯಲ್ಲ’ ಎಂದು ಮಾಜಿ ಕೇಂದ್ರ ಸಚಿವರಾದ ಶರದ್ ಪವಾರ್ ಹೇಳಿದ್ದಾರೆ.

ಪವಾರ್ ಅವರು ಮಂಗಳವಾರ ರಾತ್ರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಗಸ್ಟ್ 15 ರ ಈ ಪತ್ರವನ್ನು ಪ್ರಕಟಿಸಿದ್ದಾರೆ. ಈ ಪತ್ರವು ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ಸಹ ಉಲ್ಲೇಖಿಸಿದೆ.

“ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಸಹಕಾರಿ ಬ್ಯಾಂಕುಗಳನ್ನು ರಿಸರ್ವ್ ಬ್ಯಾಂಕಿನ ಮೇಲ್ವಿಚಾರಣೆಗೆ ತರಲಾಗುತ್ತದೆ ಎಂದು ನೀವು ಹೇಳಿದ್ದೀರಿ. ನಾನು ಆ ಉದ್ದೇಶವನ್ನು ಸ್ವಾಗತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ಅದೇ ಸಮಯದಲ್ಲಿ, ಸಹಕಾರಿ ಬ್ಯಾಂಕುಗಳ ಅಸ್ತಿತ್ವ ಮತ್ತು ಅವುಗಳ ಸಹಕಾರಿ ಪಾತ್ರವನ್ನು ಸಂರಕ್ಷಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ” ಎಂದು ಪವಾರ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕಿನ ವ್ಯಾಪಕವಾದ ಕಾರ್ಯ ನಿರ್ವಹಣೆಯಿಂದಾಗಿ ಪ್ರತಿ ವರ್ಷ, ದೇಶದ ಎಲ್ಲಾ ನಗರ ಸಹಕಾರಿ ಬ್ಯಾಂಕುಗಳ (ಯುಸಿಬಿ) ತಪಾಸಣೆ ನಡೆಸುವುದು ಅಸಾಧ್ಯವೆಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಂಡುಕೊಂಡಿದೆ. ಸೆಂಟ್ರಲ್ ಬ್ಯಾಂಕ್ 1993 ರಿಂದ ಯುಸಿಬಿಗಳನ್ನು ಖಾಸಗಿ ಬ್ಯಾಂಕುಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

“ಬ್ಯಾಂಕುಗಳಲ್ಲಿ ಹಣಕಾಸಿನ ಶಿಸ್ತು ಇರಬೇಕು ಎಂಬ ನಿಮ್ಮ ಮಾತನ್ನು ಒಪ್ಪುತ್ತೇನೆ. ಆದರೆ ಖಂಡಿತವಾಗಿಯೂ ಸಹಕಾರಿ ವಲಯವನ್ನು ಖಾಸಗಿ ವಲಯಕ್ಕೆ ಪರಿವರ್ತಿಸುವುದರಿಂದ ಹಣ, ಹಣಕಾಸಿನ ಅಕ್ರಮಗಳು ಮತ್ತು ವಂಚನೆಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ತಡೆಯುತ್ತದೆ ಎಂದು ಹೇಳುವುದು ತಪ್ಪಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ವಂಚನೆಯ ಮೊತ್ತವು 64,509.90 ಕೋಟಿ ರೂ. ಅಥವಾ ಹಣಕಾಸಿನ ಅವಧಿಯಲ್ಲಿ ವಂಚನೆಗಳಲ್ಲಿ ಭಾಗಿಯಾಗಿರುವ ಒಟ್ಟು ಮೊತ್ತದ 90.20ರಷ್ಟಿದೆ. ಖಾಸಗಿ ವಲಯದ ಬ್ಯಾಂಕುಗಳಲ್ಲಿ 5,515.10 ಕೋಟಿ ರೂ. ಅಥವಾ ಶೇ 7.69 ರಷ್ಟಿದೆ ಎಂದು ಅವರು ಹೇಳಿದರು.

“2019-20ರ ಆರ್ಥಿಕ ವರ್ಷದಲ್ಲಿ, ಪಿಎಂಸಿ ಬ್ಯಾಂಕ್ ಹಗರಣದಲ್ಲಿ 4,355 ಕೋಟಿ ರೂ.ಗಳ ವಂಚನೆ ಕಂಡುಬಂದಿದೆ. ಆದರೆ ಮೊದಲ ಅರ್ಧ ವರ್ಷದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 95,700 ಕೋಟಿ ರೂ.ಗಳ ವಂಚನೆ ವರದಿಯಾಗಿದೆ” ಎಂದು ಪವಾರ್ ಹೇಳಿದ್ದಾರೆ. ಆದ್ದರಿಂದ, ಸಹಕಾರಿ ಬ್ಯಾಂಕುಗಳಲ್ಲಿ ಮಾತ್ರ ನಿಧಿಯ ದುರುಪಯೋಗ ಅಥವಾ ಹಣಕಾಸಿನ ಅಕ್ರಮಗಳನ್ನು ಗಮನಿಸಲಾಗಿದೆ ಎಂದು ಹೇಳುವುದು ಸರಿಯಲ್ಲ ಎಂದೂ ಹೇಳಿದ್ದಾರೆ.

“ಆದರೂ ಸ್ವತಃ ಆರ್‌ಬಿಐನ ಮಾಹಿತಿಯ ಪ್ರಕಾರ, ವಾಣಿಜ್ಯ ಬ್ಯಾಂಕುಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 9.68 ಮತ್ತು ಶೇಕಡಾ 5.31 ರಷ್ಟಿದೆ. ಮತ್ತೊಂದೆಡೆ, ಯುಸಿಬಿಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 7.51 ಮತ್ತು ಶೇಕಡಾ 2.53 ಇದೆ. ಇದರಲ್ಲಿ 1,544 ಯುಸಿಬಿಗಳಲ್ಲಿ 70 ಮಾತ್ರ `ಡಿ ‘ವಿಭಾಗದಲ್ಲಿವೆ. ಆದ್ದರಿಂದ” ಸಹಕಾರಿ ಬ್ಯಾಂಕುಗಳಲ್ಲಿ ವೃತ್ತಿಪರತೆ ಇಲ್ಲ ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ “ಎಂದು ಪವಾರ್ ಹೇಳಿದ್ದಾರೆ.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್‌ಸಿ) ಬ್ಯಾಂಕಿನಲ್ಲಿ ನಡೆದದ್ದು ಒಂದು ವಂಚನೆ ಪ್ರಕರಣವಷ್ಟೆ. ಅದು ಸಹಕಾರಿ ಬ್ಯಾಂಕುಗಳ ವ್ಯವಹಾರ ವೈಫಲ್ಯವಲ್ಲ. ಆದ್ದರಿಂದ, ಈ ವಿಷಯವನ್ನು ವೈಯಕ್ತಿಕವಾಗಿ ಗಮನಿಸಿ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕೆಂದು ನಾನು ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಪವಾರ್ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಐದೇ ದಿನದಲ್ಲಿ ಶಾ ಅಧಿಕಾರದ ಡಿಸಿಸಿ ಬ್ಯಾಂಕ್‍ಗಳಲ್ಲಿ 3118 ಕೋಟಿ ರೂ. ಜಮೆ ಇದು ಗುಜರಾತ್ ಮಾಡೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...