Homeಎಕಾನಮಿಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾದ ಸಹಕಾರಿ ಬ್ಯಾಂಕುಗಳನ್ನು ರಕ್ಷಿಸಿ: ಶರದ್ ಪವಾರ್

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

ಸಹಕಾರಿ ಬ್ಯಾಂಕುಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಅವುಗಳ ಅಸ್ತಿತ್ವ ಮತ್ತು ಸಹಕಾರಿ ಗುಣವನ್ನು ರಕ್ಷಿಸಬೇಕು ಎಂದು ಕೋರಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ,

‘ಇತರೆ ಬ್ಯಾಂಕುಗಳಿಗಿಂತ ಸಹಕಾರಿ ಬ್ಯಾಂಕುಗಳು ಇಂದು ಕೆಟ್ಟ ಪರಿಸ್ಥಿತಿಯಲ್ಲಿದೆ. ಅವುಗಳನ್ನು ಖಾಸಗಿ ಘಟಕಗಳಾಗಿ ಪರಿವರ್ತಿಸುವುದರಿಂದ ವಂಚನೆಗಳು ಅಥವಾ ಅಕ್ರಮಗಳು ಕೊನೆಗೊಳ್ಳುತ್ತವೆ ಎಂಬ ಅಭಿಪ್ರಾಯ ಸರಿಯಲ್ಲ’ ಎಂದು ಮಾಜಿ ಕೇಂದ್ರ ಸಚಿವರಾದ ಶರದ್ ಪವಾರ್ ಹೇಳಿದ್ದಾರೆ.

ಪವಾರ್ ಅವರು ಮಂಗಳವಾರ ರಾತ್ರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಗಸ್ಟ್ 15 ರ ಈ ಪತ್ರವನ್ನು ಪ್ರಕಟಿಸಿದ್ದಾರೆ. ಈ ಪತ್ರವು ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ಸಹ ಉಲ್ಲೇಖಿಸಿದೆ.

“ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಸಹಕಾರಿ ಬ್ಯಾಂಕುಗಳನ್ನು ರಿಸರ್ವ್ ಬ್ಯಾಂಕಿನ ಮೇಲ್ವಿಚಾರಣೆಗೆ ತರಲಾಗುತ್ತದೆ ಎಂದು ನೀವು ಹೇಳಿದ್ದೀರಿ. ನಾನು ಆ ಉದ್ದೇಶವನ್ನು ಸ್ವಾಗತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ಅದೇ ಸಮಯದಲ್ಲಿ, ಸಹಕಾರಿ ಬ್ಯಾಂಕುಗಳ ಅಸ್ತಿತ್ವ ಮತ್ತು ಅವುಗಳ ಸಹಕಾರಿ ಪಾತ್ರವನ್ನು ಸಂರಕ್ಷಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ” ಎಂದು ಪವಾರ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕಿನ ವ್ಯಾಪಕವಾದ ಕಾರ್ಯ ನಿರ್ವಹಣೆಯಿಂದಾಗಿ ಪ್ರತಿ ವರ್ಷ, ದೇಶದ ಎಲ್ಲಾ ನಗರ ಸಹಕಾರಿ ಬ್ಯಾಂಕುಗಳ (ಯುಸಿಬಿ) ತಪಾಸಣೆ ನಡೆಸುವುದು ಅಸಾಧ್ಯವೆಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಂಡುಕೊಂಡಿದೆ. ಸೆಂಟ್ರಲ್ ಬ್ಯಾಂಕ್ 1993 ರಿಂದ ಯುಸಿಬಿಗಳನ್ನು ಖಾಸಗಿ ಬ್ಯಾಂಕುಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

“ಬ್ಯಾಂಕುಗಳಲ್ಲಿ ಹಣಕಾಸಿನ ಶಿಸ್ತು ಇರಬೇಕು ಎಂಬ ನಿಮ್ಮ ಮಾತನ್ನು ಒಪ್ಪುತ್ತೇನೆ. ಆದರೆ ಖಂಡಿತವಾಗಿಯೂ ಸಹಕಾರಿ ವಲಯವನ್ನು ಖಾಸಗಿ ವಲಯಕ್ಕೆ ಪರಿವರ್ತಿಸುವುದರಿಂದ ಹಣ, ಹಣಕಾಸಿನ ಅಕ್ರಮಗಳು ಮತ್ತು ವಂಚನೆಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ತಡೆಯುತ್ತದೆ ಎಂದು ಹೇಳುವುದು ತಪ್ಪಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

2019-20ರ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಪ್ರಕಾರ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕುಗಳು 3,766 ಮತ್ತು 2,010 ವಂಚನೆ ಪ್ರಕರಣಗಳನ್ನು ವರದಿ ಮಾಡಿದ್ದರೆ, ಸಹಕಾರಿ ಬ್ಯಾಂಕುಗಳು ಕೇವಲ 181 ವಂಚನೆಗಳನ್ನು ವರದಿ ಮಾಡಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿನ ವಂಚನೆಯ ಮೊತ್ತವು 64,509.90 ಕೋಟಿ ರೂ. ಅಥವಾ ಹಣಕಾಸಿನ ಅವಧಿಯಲ್ಲಿ ವಂಚನೆಗಳಲ್ಲಿ ಭಾಗಿಯಾಗಿರುವ ಒಟ್ಟು ಮೊತ್ತದ 90.20ರಷ್ಟಿದೆ. ಖಾಸಗಿ ವಲಯದ ಬ್ಯಾಂಕುಗಳಲ್ಲಿ 5,515.10 ಕೋಟಿ ರೂ. ಅಥವಾ ಶೇ 7.69 ರಷ್ಟಿದೆ ಎಂದು ಅವರು ಹೇಳಿದರು.

“2019-20ರ ಆರ್ಥಿಕ ವರ್ಷದಲ್ಲಿ, ಪಿಎಂಸಿ ಬ್ಯಾಂಕ್ ಹಗರಣದಲ್ಲಿ 4,355 ಕೋಟಿ ರೂ.ಗಳ ವಂಚನೆ ಕಂಡುಬಂದಿದೆ. ಆದರೆ ಮೊದಲ ಅರ್ಧ ವರ್ಷದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 95,700 ಕೋಟಿ ರೂ.ಗಳ ವಂಚನೆ ವರದಿಯಾಗಿದೆ” ಎಂದು ಪವಾರ್ ಹೇಳಿದ್ದಾರೆ. ಆದ್ದರಿಂದ, ಸಹಕಾರಿ ಬ್ಯಾಂಕುಗಳಲ್ಲಿ ಮಾತ್ರ ನಿಧಿಯ ದುರುಪಯೋಗ ಅಥವಾ ಹಣಕಾಸಿನ ಅಕ್ರಮಗಳನ್ನು ಗಮನಿಸಲಾಗಿದೆ ಎಂದು ಹೇಳುವುದು ಸರಿಯಲ್ಲ ಎಂದೂ ಹೇಳಿದ್ದಾರೆ.

“ಆದರೂ ಸ್ವತಃ ಆರ್‌ಬಿಐನ ಮಾಹಿತಿಯ ಪ್ರಕಾರ, ವಾಣಿಜ್ಯ ಬ್ಯಾಂಕುಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 9.68 ಮತ್ತು ಶೇಕಡಾ 5.31 ರಷ್ಟಿದೆ. ಮತ್ತೊಂದೆಡೆ, ಯುಸಿಬಿಗಳ ಒಟ್ಟು ಮತ್ತು ನಿವ್ವಳ ಎನ್‌ಪಿಎ ಶೇಕಡಾ 7.51 ಮತ್ತು ಶೇಕಡಾ 2.53 ಇದೆ. ಇದರಲ್ಲಿ 1,544 ಯುಸಿಬಿಗಳಲ್ಲಿ 70 ಮಾತ್ರ `ಡಿ ‘ವಿಭಾಗದಲ್ಲಿವೆ. ಆದ್ದರಿಂದ” ಸಹಕಾರಿ ಬ್ಯಾಂಕುಗಳಲ್ಲಿ ವೃತ್ತಿಪರತೆ ಇಲ್ಲ ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ “ಎಂದು ಪವಾರ್ ಹೇಳಿದ್ದಾರೆ.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್‌ಸಿ) ಬ್ಯಾಂಕಿನಲ್ಲಿ ನಡೆದದ್ದು ಒಂದು ವಂಚನೆ ಪ್ರಕರಣವಷ್ಟೆ. ಅದು ಸಹಕಾರಿ ಬ್ಯಾಂಕುಗಳ ವ್ಯವಹಾರ ವೈಫಲ್ಯವಲ್ಲ. ಆದ್ದರಿಂದ, ಈ ವಿಷಯವನ್ನು ವೈಯಕ್ತಿಕವಾಗಿ ಗಮನಿಸಿ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕೆಂದು ನಾನು ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಪವಾರ್ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಐದೇ ದಿನದಲ್ಲಿ ಶಾ ಅಧಿಕಾರದ ಡಿಸಿಸಿ ಬ್ಯಾಂಕ್‍ಗಳಲ್ಲಿ 3118 ಕೋಟಿ ರೂ. ಜಮೆ ಇದು ಗುಜರಾತ್ ಮಾಡೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....