Homeಮುಖಪುಟಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

ಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

- Advertisement -
- Advertisement -

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‌ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ರಾಜ್ಯದ ಅವಳಿ ಮಲೆನಾಡು ಜಿಲ್ಲೆ ಎಂದರೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು. ಈ ಎರಡೂ ಜಿಲ್ಲೆಯ ಸುಮಾರು 16 ತಾಲೂಕುಗಳೂ ಸೇರಿದಂತೆ ಇಲ್ಲಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಭಾಗವಾದ ಮಂಗಳೂರಿಗೂ ಸಂಪರ್ಕ ಕಲ್ಪಿಸುವ ರಾಜ್ಯದ ಅತಿದೊಡ್ಡ ರಸ್ತೆ ಸಾರಿಗೆ ಸಂಪರ್ಕ ಜಾಲದಲ್ಲೊಂದಾದ ಸಹಕಾರ ಸಾರಿಗೆ ಇಂದು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲದೆ, ಸರ್ಕಾರದ ಅಸಹಕಾರಕ್ಕೆ ಬೇಸತ್ತು ಫೆಬ್ರವರಿ 17 ರಿಂದ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‍ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಸೇವೆ ಎಂದೇ ಪರಿಗಣಿಸುತ್ತದೆ. ಆದರೆ ಸರ್ಕಾರ ಇದನ್ನು ನಿಜಕ್ಕೂ ಪಾಲಿಸುತ್ತದೆಯೋ ಇಲ್ಲವೋ? ಆದರೆ, ಇದನ್ನು ರಾಜ್ಯದ ಮಟ್ಟಿಗೆ ನಿಜವಾಗಿಯೂ ಪಾಲಿಸಿದ್ದು ಸಹಕಾರ ಸಾರಿಗೆ. ಇಂದು ದೇಶ-ವಿದೇಶದಲ್ಲಿ ಉನ್ನತ ಮಟ್ಟದ ನಾನಾ ಕೆಲಸದಲ್ಲಿರುವ ವಿದ್ಯಾರ್ಥಿಗಳು ಇದೇ ಸಹಕಾರ ಸಾರಿಗೆ ರಿಯಾಯಿತಿ ಬಸ್ ಪಾಸ್‍ನಲ್ಲಿ ಓಡಾಡಿದವರು. ಇನ್ನೂ ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು ವಿಕಲಚೇತನರಿಗೆ ಶೇ.50 ರಷ್ಟು ರಿಯಾಯಿತಿ ನೀಡಿದ ಮೊದಲ ಖಾಸಗಿ ಸಾರಿಗೆ ಸಂಸ್ಥೆ ಎಂಬ ಖ್ಯಾತಿಯೂ ಸಹಕಾರಿ ಸಾರಿಗೆಗೆ ಇದೆ.

ಹೀಗೆ ಮಲೆನಾಡು ಭಾಗದ ಇಂಚಿಂಚೂ ಓಡಾಡಿ ಅಕ್ಷರಶಃ ಜನರ ಜೀವನಾಡಿಯೇ ಆಗಿಹೋದ ಸಹಕಾರ ಸಾರಿಗೆ ಇಂದು ತನ್ನ ಸೇವೆಯನ್ನೇ ಸ್ಥಗಿತಗೊಳಿಸಿದೆ. ಸಹಕಾರ ವಿಭಾಗದಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದ ಸಾರಿಗೆ ವ್ಯವಸ್ಥೆ ಇಂದು ಅಕ್ಷರಶಃ ಇತಿಹಾಸ ಪುಟಕ್ಕೆ ಸೇರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಈ ಹಿನ್ನೆಲೆ ಸಹಕಾರ ಸಾರಿಗೆ ವ್ಯವಸ್ಥೆಯ ಇತಿಹಾಸ ಹಿನ್ನೆಲೆ ಏನು? ಮಲೆನಾಡು ಭಾಗದಲ್ಲಿ ಈ ಸಂಸ್ಥೆ ಸೃಷ್ಟಿಸಿರುವ ಇತಿಹಾಸ ಎಂಥಾದ್ದು? ಈಗನ ನಷ್ಟಕ್ಕೆ ಕಾರಣವೇನು? ಈ ಸಂಸ್ಥೆಯ ಸಂಕಷ್ಟಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಹಕಾರ ಸಾರಿಗೆ ಹಿನ್ನೆಲೆ ಮತ್ತು ಇತಿಹಾಸ
ಮಲೆನಾಡಿನಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶಂಕರ್ ಟ್ರಾನ್ಸ್ಪೋರ್ಟ್ ಕಂಪೆನಿ 1991ರಲ್ಲಿ ನಷ್ಟದ ಕಾರಣ ಮುಚ್ಚಲಾಯಿತು. ಈ ವೇಳೆ ಕಂಪೆನಿಯಲ್ಲಿ ಕೆಲಸ ನಿರ್ವಹಿಸಿದ್ದ ಸುಮಾರು 300 ಕಾರ್ಮಿಕರ ಬದುಕು ಬೀದಿಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ದಿವಂಗತ ಬಿ.ಕೆ. ಸುಂದರೇಶ್ ಮತ್ತು ಹೋರಾಟಗಾರ ಸಿರಿಮನೆ ನಾಗರಾಜ್ ಇದೇ ಕಾರ್ಮಿಕರನ್ನು ಒಟ್ಟುಗೂಡಿಸಿ ಎಲ್ಲರೂ ತಮ್ಮ ಕೈಲಾದ ಹಣವನ್ನು ಕ್ರೋಢೀಕರಿಸಿ ಕೇವಲ 12 ಲಕ್ಷ ರೂ. ಬಂಡವಾಳದಲ್ಲಿ ಹುಟ್ಟು ಹಾಕಿದ ಸಂಸ್ಥೆಯೇ ಸಹಕಾರ ಸಾರಿಗೆ ಸಂಸ್ಥೆ. ಭಾಗಶಃ ಇಡೀ ದೇಶದಲ್ಲೇ ಕಾರ್ಮಿಕರೇ ಮಾಲೀಕರಾಗಿ ಆರಂಭಿಸಿದ ಮೊದಲ ಸಂಸ್ಥೆ ಇದು.

ಸಂಸ್ಥೆಯಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ತಾನೇ ಮಾಲೀಕ ಎಂಬಂತೆ ಹಗಲಿರುಳು ಶ್ರಮಿಸಿದ ಫಲವಾಗಿ 6 ಬಸ್‍ಗಳಿಂದ ಆರಂಭವಾದ ಸಂಸ್ಥೆಯಲ್ಲಿ ಇಂದು 76 ಬಸ್‍ಗಳಿವೆ. ಕೊಪ್ಪದಲ್ಲಿ ಕೇಂದ್ರ ಕಚೇರಿ ಇದ್ದರೆ, ಕೊಪ್ಪ ಮತ್ತು ಶೃಂಗೇರಿ ಎರಡು ಕಡೆಗಳಲ್ಲಿ ಸ್ವಂತ ಗ್ಯಾರೇಜ್ ಅನ್ನು ಈ ಸಂಸ್ಥೆ ಹೊಂದಿದೆ.

ಮಲೆನಾಡಿನ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ನೌಕರ ವರ್ಗ ಹಾಗೂ ಪ್ರವಾಸಿಗರು ಸೇರಿದಂತೆ ಅನೇಕರು ಕಳೆದ 3 ದಶಕಗಳಿಂದ ಈ ಸಾರಿಗೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಂಚಾರ, ಸಮಯ ಪಾಲನೆ ಹಾಗೂ ಶಿಸ್ತಿಗೆ ಈ ಸಂಸ್ಥೆ ಹೆಸರುವಾಸಿ. ಆದರೆ, 2017ರಲ್ಲಿ ಬೆಳ್ಳಿಹಬ್ಬ ಆಚರಿಸಿದ ಈ ಸಂಸ್ಥೆ ಕೇವಲ ಮೂರು ವರ್ಷದಲ್ಲಿ ಇದೀಗ ನಷ್ಟದ ಸುಳಿಯಲ್ಲಿ ಸಿಲುಕಿ ಏದುಸಿರು ಬಿಡುತ್ತಿದೆ.

ಸಂಸ್ಥೆಯ ನಷ್ಟಕ್ಕೆ ಕಾರಣವೇನು?
ಕಳೆದ ಮೂರು ನಾಲ್ಕು ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸಲಾಗುತ್ತಿದೆ. ಆದರೆ, 2013ರಿಂದ ಸಹಕಾರಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸಲಾಗಿಲ್ಲ. ಇದರಿಂದ ಸಂಸ್ಥೆಯ ಆದಾಯ ಕುಂಠಿತವಾಗಿದೆ. ಅಲ್ಲದೆ, ಡೀಸೆಲ್ ಬೆಲೆ ಏರಿಕೆಯಿಂದಲೇ ಪ್ರತಿ ತಿಂಗಳು ಕನಿಷ್ಟ 24 ಲಕ್ಷ ಹಣ ಸಂಸ್ಥೆಗೆ ನಷ್ಟವಾಗುತ್ತಿದೆ ಎನ್ನಲಾಗುತ್ತಿದೆ.

ಇದರ ಜೊತೆಗೆ ವರ್ಷಕ್ಕೆ 1.5 ಕೋಟಿ ಹಣವನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿ ಮಾಡಲಾಗುತ್ತಿದೆ. ಇನ್ನೂ ಬಸ್ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳು , ವಿಕಲಚೇತನರು, ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದವರಿಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪರಿಣಾಮ ಸಂಸ್ಥೆಗೆ ಆರ್ಥಿಕ ಹೊರೆ ಅಧಿಕವಾಗಿದ್ದು, ಪ್ರತಿ ತಿಂಗಳ ಖರ್ಚನ್ನು ನಿಭಾಯಿಸುವುದೇ ದುಸ್ತರವಾಗಿದೆ ಎನ್ನುತ್ತಾರೆ ಸಂಸ್ಥೆಯ ಪದಾಧಿಕಾರಿಗಳು.

ಸರ್ಕಾರದ ಎದುರು ಸಂಸ್ಥೆ ಇಟ್ಟಿರುವ ಬೇಡಿಕೆ ಏನು?
ಸಹಕಾರ ಸಾರಿಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಿದೆ. ಈ ಪೈಕಿ ಸರ್ಕಾರ ಪ್ರತಿವರ್ಷ ರಿಯಾಯಿತಿ ಪಾಸ್ ಬಾಬ್ತು 6.6 ಕೋಟಿ ಹಣವನ್ನು ಸಂಸ್ಥೆಗೆ ಪಾವತಿ ಮಾಡಬೇಕು. ಆದರೆ, ಈವರೆಗೆ ಈ ಹಣ ಬಿಡುಗಡೆಯಾಗಿಲ್ಲ.

ಇದಲ್ಲದೆ, ಸಂಸ್ಥೆಯ ಬಸ್‍ಗಳ ಡೀಸೆಲ್ ಖರೀದಿಯಲ್ಲಿ ತೆರಿಗೆ ವಿನಾಯಿತಿ ನೀಡಬೇಕು, ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಸಹಕಾರ ತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರ ಸಾರಿಗೆಗೂ ನೀಡಬೇಕು ಎಂಬುದು ಸಂಸ್ಥೆಯ ಬೇಡಿಕೆ. ಆದರೆ, ಈವರೆಗೆ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಿಲ್ಲ ಎಂಬುದೇ ದುರದೃಷ್ಟಕರ ಸಂಗತಿ.

ಮಲೆನಾಡಿನ ಈ ಸಹಕಾರ ಸಾರಿಗೆಯ ಸೇವಾ ಮನೋಭಾವವನ್ನು ಜಪಾನ್ ಸರ್ಕಾರ ಮೆಚ್ಚಿಕೊಂಡಿತ್ತು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಡಾಕ್ಟರೇಟ್ ಪದವಿ ಪಡೆದರು, ಮಣಿಪಾಲ್ ಸ್ನಾತಕೋತ್ತರ ಪದವಿಗೆ ಸಹಕಾರ ಸಾರಿಗೆ ಪಠ್ಯವಾಗಿಯೇ ಬದಲಾಗಿತ್ತು. ಇನ್ನೂ ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಯ ಇದರ ಮೇಲಿನ ಸಂಶೋಧನೆಗೆ ಪಿಹೆಚ್ಡಿ ಪದವಿಯನ್ನು ಪ್ರದಾನ ಮಾಡಿತ್ತು.

ಆದರೆ, ಇಷ್ಟೆಲ್ಲಾ ಶ್ರೇಯಕ್ಕೆ ಪಾತ್ರವಾದ ಸಹಕಾರ ಸಾರಿಗೆ ಇಂದು ಅಳಿವಿನ ಅಂಚಿನಲ್ಲಿದೆ, ಇತಿಹಾಸದ ಕಾಲಗರ್ಭ ಸೇರಲು ಅವಸರಿಸುತ್ತಿದೆ ಎಂಬ ವಿಚಾರವನ್ನು ಜೀರ್ಣಿಸಿಕೊಳ್ಳುವುದು ನಿಜಕ್ಕೂ ಕಷ್ಟದಾಯಕವಾದ ವಿಚಾರ. ಅಲ್ಲದೆ, ಮಲೆನಾಡಿಗರ ಅತೀ ಅವಶ್ಯಕವಾದ ವಿಚಾರಗಳಲ್ಲಿ ಸಹಕಾರ ಸಾರಿಗೆ ಪ್ರಮುಖವಾದದ್ದು. ಹೀಗಾಗಿ ಸರ್ಕಾರ ಈ ಸಂಸ್ಥೆಯ ಪುನಶ್ಚೇತನಕ್ಕೆ ಸಹಕಾರ ನೀಡಲೇಬೇಕಿದೆ.

ನಷ್ಟಕ್ಕೆ ಸರ್ಕಾರವೇ ಕಾರಣ ಹೊರತು ಸಹಕಾರಿ ಸಾರಿಗೆಯಲ್ಲ- ಸಿರಿಮನೆ ನಾಗರಾಜ್

ಸಹಕಾರಿ ಸಂಸ್ಥೆಯ ಸದಸ್ಯರು ಸದ್ಯಕ್ಕೆ ಧರಣಿ ಕೂತಿದ್ದಾರೆ. ಕೆ.ಎಸ್.ಆರ್.ಟಿ.ಸಿಗೆ ನೀಡುವ ಸವಲತ್ತುಗಳನ್ನು ನಮಗೂ ನೀಡಿ ಎಂಬುದು ಅವರ ಬೇಡಿಕೆ. ಏಕೆಂದರೆ ಸಹಕಾರಿ ಸಾರಿಗೆಯವರು ಲಾಭ ನಷ್ಟದ ಯೋಚನೆಯಿಲ್ಲದೇ ಸಾಮಾಜಿಕ ಜವಾಬ್ದಾರಿ ಎಂದು ತಿಳಿದು ಮಲೆನಾಡಿನ ದೂರ ದೂರದ ಹಳ್ಳಿಗಳಿಗೂ ಬಸ್ ಸೌಲಭ್ಯ ನೀಡಿದ್ದಾರೆ. ಅಲ್ಲದೇ ಶಾಲಾಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗೆ ಬಹಳಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ.

ಸದ್ಯ ಸರ್ಕಾರದ ನಿಷ್ಕ್ರಿಯತೆ ಮತ್ತು ನಿಷ್ಕಾಳಜಿಯಿಂದು ಒಂದು ವೇಳೆ ಈ ಸಹಕಾರಿ ಸಾರಿಗೆ ಮುಚ್ಚಿಹೋದರೆ ಅರ್ಧ ಮಲೆನಾಡು ಸಮರ್ಪಕ ಸಂಪರ್ಕವಿಲ್ಲದೇ ಸ್ತಬ್ದವಾಗುವುದರಲ್ಲಿ ಅನುಮಾನವಿಲ್ಲ. ಸಹಕಾರಿ ಸಂಸ್ಥೆಯ ನಷ್ಟಕ್ಕೆ ಮಿಸ್ ಮ್ಯಾನೇಜ್‍ಮೆಂಟ್, ಹಣದ ದುರ್ಬಳಕೆ ಕಾರಣವಲ್ಲ. ಡೀಸೆಲ್ ಸಬ್ಸಿಡಿ, ರಸ್ತೆ ತೆರಿಗೆ ವಿನಾಯಿತಿಯಂತಹ ಹಲವು ಸರ್ಕಾರದ ಸವಲತ್ತುಗಳು ಸಿಗದಿರುವುದು, ಡಿಸೇಲ್ ಬೆಲೆ ದಿನೇ ದಿನೇ ಏರುತ್ತಿರುವುದು ಕಾರಣವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಐತಿಹಾಸಿಕ ಸಹಕಾರಿ ಸಾರಿಗೆಯನ್ನು ಉಳಿಸಬೇಕು. ಅವರ ಹೋರಾಟಕ್ಕೆ ನಾನು ಸಂಪೂರ್ಣವಾಗಿ ಬೆಂಬಲ ಕೊಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...