Homeಮುಖಪುಟಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

ಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

- Advertisement -
- Advertisement -

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‌ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ರಾಜ್ಯದ ಅವಳಿ ಮಲೆನಾಡು ಜಿಲ್ಲೆ ಎಂದರೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು. ಈ ಎರಡೂ ಜಿಲ್ಲೆಯ ಸುಮಾರು 16 ತಾಲೂಕುಗಳೂ ಸೇರಿದಂತೆ ಇಲ್ಲಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಭಾಗವಾದ ಮಂಗಳೂರಿಗೂ ಸಂಪರ್ಕ ಕಲ್ಪಿಸುವ ರಾಜ್ಯದ ಅತಿದೊಡ್ಡ ರಸ್ತೆ ಸಾರಿಗೆ ಸಂಪರ್ಕ ಜಾಲದಲ್ಲೊಂದಾದ ಸಹಕಾರ ಸಾರಿಗೆ ಇಂದು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲದೆ, ಸರ್ಕಾರದ ಅಸಹಕಾರಕ್ಕೆ ಬೇಸತ್ತು ಫೆಬ್ರವರಿ 17 ರಿಂದ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‍ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಸೇವೆ ಎಂದೇ ಪರಿಗಣಿಸುತ್ತದೆ. ಆದರೆ ಸರ್ಕಾರ ಇದನ್ನು ನಿಜಕ್ಕೂ ಪಾಲಿಸುತ್ತದೆಯೋ ಇಲ್ಲವೋ? ಆದರೆ, ಇದನ್ನು ರಾಜ್ಯದ ಮಟ್ಟಿಗೆ ನಿಜವಾಗಿಯೂ ಪಾಲಿಸಿದ್ದು ಸಹಕಾರ ಸಾರಿಗೆ. ಇಂದು ದೇಶ-ವಿದೇಶದಲ್ಲಿ ಉನ್ನತ ಮಟ್ಟದ ನಾನಾ ಕೆಲಸದಲ್ಲಿರುವ ವಿದ್ಯಾರ್ಥಿಗಳು ಇದೇ ಸಹಕಾರ ಸಾರಿಗೆ ರಿಯಾಯಿತಿ ಬಸ್ ಪಾಸ್‍ನಲ್ಲಿ ಓಡಾಡಿದವರು. ಇನ್ನೂ ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು ವಿಕಲಚೇತನರಿಗೆ ಶೇ.50 ರಷ್ಟು ರಿಯಾಯಿತಿ ನೀಡಿದ ಮೊದಲ ಖಾಸಗಿ ಸಾರಿಗೆ ಸಂಸ್ಥೆ ಎಂಬ ಖ್ಯಾತಿಯೂ ಸಹಕಾರಿ ಸಾರಿಗೆಗೆ ಇದೆ.

ಹೀಗೆ ಮಲೆನಾಡು ಭಾಗದ ಇಂಚಿಂಚೂ ಓಡಾಡಿ ಅಕ್ಷರಶಃ ಜನರ ಜೀವನಾಡಿಯೇ ಆಗಿಹೋದ ಸಹಕಾರ ಸಾರಿಗೆ ಇಂದು ತನ್ನ ಸೇವೆಯನ್ನೇ ಸ್ಥಗಿತಗೊಳಿಸಿದೆ. ಸಹಕಾರ ವಿಭಾಗದಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದ ಸಾರಿಗೆ ವ್ಯವಸ್ಥೆ ಇಂದು ಅಕ್ಷರಶಃ ಇತಿಹಾಸ ಪುಟಕ್ಕೆ ಸೇರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಈ ಹಿನ್ನೆಲೆ ಸಹಕಾರ ಸಾರಿಗೆ ವ್ಯವಸ್ಥೆಯ ಇತಿಹಾಸ ಹಿನ್ನೆಲೆ ಏನು? ಮಲೆನಾಡು ಭಾಗದಲ್ಲಿ ಈ ಸಂಸ್ಥೆ ಸೃಷ್ಟಿಸಿರುವ ಇತಿಹಾಸ ಎಂಥಾದ್ದು? ಈಗನ ನಷ್ಟಕ್ಕೆ ಕಾರಣವೇನು? ಈ ಸಂಸ್ಥೆಯ ಸಂಕಷ್ಟಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಹಕಾರ ಸಾರಿಗೆ ಹಿನ್ನೆಲೆ ಮತ್ತು ಇತಿಹಾಸ
ಮಲೆನಾಡಿನಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶಂಕರ್ ಟ್ರಾನ್ಸ್ಪೋರ್ಟ್ ಕಂಪೆನಿ 1991ರಲ್ಲಿ ನಷ್ಟದ ಕಾರಣ ಮುಚ್ಚಲಾಯಿತು. ಈ ವೇಳೆ ಕಂಪೆನಿಯಲ್ಲಿ ಕೆಲಸ ನಿರ್ವಹಿಸಿದ್ದ ಸುಮಾರು 300 ಕಾರ್ಮಿಕರ ಬದುಕು ಬೀದಿಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ದಿವಂಗತ ಬಿ.ಕೆ. ಸುಂದರೇಶ್ ಮತ್ತು ಹೋರಾಟಗಾರ ಸಿರಿಮನೆ ನಾಗರಾಜ್ ಇದೇ ಕಾರ್ಮಿಕರನ್ನು ಒಟ್ಟುಗೂಡಿಸಿ ಎಲ್ಲರೂ ತಮ್ಮ ಕೈಲಾದ ಹಣವನ್ನು ಕ್ರೋಢೀಕರಿಸಿ ಕೇವಲ 12 ಲಕ್ಷ ರೂ. ಬಂಡವಾಳದಲ್ಲಿ ಹುಟ್ಟು ಹಾಕಿದ ಸಂಸ್ಥೆಯೇ ಸಹಕಾರ ಸಾರಿಗೆ ಸಂಸ್ಥೆ. ಭಾಗಶಃ ಇಡೀ ದೇಶದಲ್ಲೇ ಕಾರ್ಮಿಕರೇ ಮಾಲೀಕರಾಗಿ ಆರಂಭಿಸಿದ ಮೊದಲ ಸಂಸ್ಥೆ ಇದು.

ಸಂಸ್ಥೆಯಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ತಾನೇ ಮಾಲೀಕ ಎಂಬಂತೆ ಹಗಲಿರುಳು ಶ್ರಮಿಸಿದ ಫಲವಾಗಿ 6 ಬಸ್‍ಗಳಿಂದ ಆರಂಭವಾದ ಸಂಸ್ಥೆಯಲ್ಲಿ ಇಂದು 76 ಬಸ್‍ಗಳಿವೆ. ಕೊಪ್ಪದಲ್ಲಿ ಕೇಂದ್ರ ಕಚೇರಿ ಇದ್ದರೆ, ಕೊಪ್ಪ ಮತ್ತು ಶೃಂಗೇರಿ ಎರಡು ಕಡೆಗಳಲ್ಲಿ ಸ್ವಂತ ಗ್ಯಾರೇಜ್ ಅನ್ನು ಈ ಸಂಸ್ಥೆ ಹೊಂದಿದೆ.

ಮಲೆನಾಡಿನ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ನೌಕರ ವರ್ಗ ಹಾಗೂ ಪ್ರವಾಸಿಗರು ಸೇರಿದಂತೆ ಅನೇಕರು ಕಳೆದ 3 ದಶಕಗಳಿಂದ ಈ ಸಾರಿಗೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಂಚಾರ, ಸಮಯ ಪಾಲನೆ ಹಾಗೂ ಶಿಸ್ತಿಗೆ ಈ ಸಂಸ್ಥೆ ಹೆಸರುವಾಸಿ. ಆದರೆ, 2017ರಲ್ಲಿ ಬೆಳ್ಳಿಹಬ್ಬ ಆಚರಿಸಿದ ಈ ಸಂಸ್ಥೆ ಕೇವಲ ಮೂರು ವರ್ಷದಲ್ಲಿ ಇದೀಗ ನಷ್ಟದ ಸುಳಿಯಲ್ಲಿ ಸಿಲುಕಿ ಏದುಸಿರು ಬಿಡುತ್ತಿದೆ.

ಸಂಸ್ಥೆಯ ನಷ್ಟಕ್ಕೆ ಕಾರಣವೇನು?
ಕಳೆದ ಮೂರು ನಾಲ್ಕು ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸಲಾಗುತ್ತಿದೆ. ಆದರೆ, 2013ರಿಂದ ಸಹಕಾರಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸಲಾಗಿಲ್ಲ. ಇದರಿಂದ ಸಂಸ್ಥೆಯ ಆದಾಯ ಕುಂಠಿತವಾಗಿದೆ. ಅಲ್ಲದೆ, ಡೀಸೆಲ್ ಬೆಲೆ ಏರಿಕೆಯಿಂದಲೇ ಪ್ರತಿ ತಿಂಗಳು ಕನಿಷ್ಟ 24 ಲಕ್ಷ ಹಣ ಸಂಸ್ಥೆಗೆ ನಷ್ಟವಾಗುತ್ತಿದೆ ಎನ್ನಲಾಗುತ್ತಿದೆ.

ಇದರ ಜೊತೆಗೆ ವರ್ಷಕ್ಕೆ 1.5 ಕೋಟಿ ಹಣವನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿ ಮಾಡಲಾಗುತ್ತಿದೆ. ಇನ್ನೂ ಬಸ್ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳು , ವಿಕಲಚೇತನರು, ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದವರಿಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪರಿಣಾಮ ಸಂಸ್ಥೆಗೆ ಆರ್ಥಿಕ ಹೊರೆ ಅಧಿಕವಾಗಿದ್ದು, ಪ್ರತಿ ತಿಂಗಳ ಖರ್ಚನ್ನು ನಿಭಾಯಿಸುವುದೇ ದುಸ್ತರವಾಗಿದೆ ಎನ್ನುತ್ತಾರೆ ಸಂಸ್ಥೆಯ ಪದಾಧಿಕಾರಿಗಳು.

ಸರ್ಕಾರದ ಎದುರು ಸಂಸ್ಥೆ ಇಟ್ಟಿರುವ ಬೇಡಿಕೆ ಏನು?
ಸಹಕಾರ ಸಾರಿಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಿದೆ. ಈ ಪೈಕಿ ಸರ್ಕಾರ ಪ್ರತಿವರ್ಷ ರಿಯಾಯಿತಿ ಪಾಸ್ ಬಾಬ್ತು 6.6 ಕೋಟಿ ಹಣವನ್ನು ಸಂಸ್ಥೆಗೆ ಪಾವತಿ ಮಾಡಬೇಕು. ಆದರೆ, ಈವರೆಗೆ ಈ ಹಣ ಬಿಡುಗಡೆಯಾಗಿಲ್ಲ.

ಇದಲ್ಲದೆ, ಸಂಸ್ಥೆಯ ಬಸ್‍ಗಳ ಡೀಸೆಲ್ ಖರೀದಿಯಲ್ಲಿ ತೆರಿಗೆ ವಿನಾಯಿತಿ ನೀಡಬೇಕು, ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಸಹಕಾರ ತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರ ಸಾರಿಗೆಗೂ ನೀಡಬೇಕು ಎಂಬುದು ಸಂಸ್ಥೆಯ ಬೇಡಿಕೆ. ಆದರೆ, ಈವರೆಗೆ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಿಲ್ಲ ಎಂಬುದೇ ದುರದೃಷ್ಟಕರ ಸಂಗತಿ.

ಮಲೆನಾಡಿನ ಈ ಸಹಕಾರ ಸಾರಿಗೆಯ ಸೇವಾ ಮನೋಭಾವವನ್ನು ಜಪಾನ್ ಸರ್ಕಾರ ಮೆಚ್ಚಿಕೊಂಡಿತ್ತು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಡಾಕ್ಟರೇಟ್ ಪದವಿ ಪಡೆದರು, ಮಣಿಪಾಲ್ ಸ್ನಾತಕೋತ್ತರ ಪದವಿಗೆ ಸಹಕಾರ ಸಾರಿಗೆ ಪಠ್ಯವಾಗಿಯೇ ಬದಲಾಗಿತ್ತು. ಇನ್ನೂ ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಯ ಇದರ ಮೇಲಿನ ಸಂಶೋಧನೆಗೆ ಪಿಹೆಚ್ಡಿ ಪದವಿಯನ್ನು ಪ್ರದಾನ ಮಾಡಿತ್ತು.

ಆದರೆ, ಇಷ್ಟೆಲ್ಲಾ ಶ್ರೇಯಕ್ಕೆ ಪಾತ್ರವಾದ ಸಹಕಾರ ಸಾರಿಗೆ ಇಂದು ಅಳಿವಿನ ಅಂಚಿನಲ್ಲಿದೆ, ಇತಿಹಾಸದ ಕಾಲಗರ್ಭ ಸೇರಲು ಅವಸರಿಸುತ್ತಿದೆ ಎಂಬ ವಿಚಾರವನ್ನು ಜೀರ್ಣಿಸಿಕೊಳ್ಳುವುದು ನಿಜಕ್ಕೂ ಕಷ್ಟದಾಯಕವಾದ ವಿಚಾರ. ಅಲ್ಲದೆ, ಮಲೆನಾಡಿಗರ ಅತೀ ಅವಶ್ಯಕವಾದ ವಿಚಾರಗಳಲ್ಲಿ ಸಹಕಾರ ಸಾರಿಗೆ ಪ್ರಮುಖವಾದದ್ದು. ಹೀಗಾಗಿ ಸರ್ಕಾರ ಈ ಸಂಸ್ಥೆಯ ಪುನಶ್ಚೇತನಕ್ಕೆ ಸಹಕಾರ ನೀಡಲೇಬೇಕಿದೆ.

ನಷ್ಟಕ್ಕೆ ಸರ್ಕಾರವೇ ಕಾರಣ ಹೊರತು ಸಹಕಾರಿ ಸಾರಿಗೆಯಲ್ಲ- ಸಿರಿಮನೆ ನಾಗರಾಜ್

ಸಹಕಾರಿ ಸಂಸ್ಥೆಯ ಸದಸ್ಯರು ಸದ್ಯಕ್ಕೆ ಧರಣಿ ಕೂತಿದ್ದಾರೆ. ಕೆ.ಎಸ್.ಆರ್.ಟಿ.ಸಿಗೆ ನೀಡುವ ಸವಲತ್ತುಗಳನ್ನು ನಮಗೂ ನೀಡಿ ಎಂಬುದು ಅವರ ಬೇಡಿಕೆ. ಏಕೆಂದರೆ ಸಹಕಾರಿ ಸಾರಿಗೆಯವರು ಲಾಭ ನಷ್ಟದ ಯೋಚನೆಯಿಲ್ಲದೇ ಸಾಮಾಜಿಕ ಜವಾಬ್ದಾರಿ ಎಂದು ತಿಳಿದು ಮಲೆನಾಡಿನ ದೂರ ದೂರದ ಹಳ್ಳಿಗಳಿಗೂ ಬಸ್ ಸೌಲಭ್ಯ ನೀಡಿದ್ದಾರೆ. ಅಲ್ಲದೇ ಶಾಲಾಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗೆ ಬಹಳಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ.

ಸದ್ಯ ಸರ್ಕಾರದ ನಿಷ್ಕ್ರಿಯತೆ ಮತ್ತು ನಿಷ್ಕಾಳಜಿಯಿಂದು ಒಂದು ವೇಳೆ ಈ ಸಹಕಾರಿ ಸಾರಿಗೆ ಮುಚ್ಚಿಹೋದರೆ ಅರ್ಧ ಮಲೆನಾಡು ಸಮರ್ಪಕ ಸಂಪರ್ಕವಿಲ್ಲದೇ ಸ್ತಬ್ದವಾಗುವುದರಲ್ಲಿ ಅನುಮಾನವಿಲ್ಲ. ಸಹಕಾರಿ ಸಂಸ್ಥೆಯ ನಷ್ಟಕ್ಕೆ ಮಿಸ್ ಮ್ಯಾನೇಜ್‍ಮೆಂಟ್, ಹಣದ ದುರ್ಬಳಕೆ ಕಾರಣವಲ್ಲ. ಡೀಸೆಲ್ ಸಬ್ಸಿಡಿ, ರಸ್ತೆ ತೆರಿಗೆ ವಿನಾಯಿತಿಯಂತಹ ಹಲವು ಸರ್ಕಾರದ ಸವಲತ್ತುಗಳು ಸಿಗದಿರುವುದು, ಡಿಸೇಲ್ ಬೆಲೆ ದಿನೇ ದಿನೇ ಏರುತ್ತಿರುವುದು ಕಾರಣವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಐತಿಹಾಸಿಕ ಸಹಕಾರಿ ಸಾರಿಗೆಯನ್ನು ಉಳಿಸಬೇಕು. ಅವರ ಹೋರಾಟಕ್ಕೆ ನಾನು ಸಂಪೂರ್ಣವಾಗಿ ಬೆಂಬಲ ಕೊಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...