Homeಮುಖಪುಟಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

ಸರಕಾರದ ಅಸಹಕಾರ; ಇತಿಹಾಸದ ಪುಟದತ್ತ ಮಲೆನಾಡಿನ ಸಹಕಾರ ಸಾರಿಗೆ!

- Advertisement -
- Advertisement -

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‌ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ರಾಜ್ಯದ ಅವಳಿ ಮಲೆನಾಡು ಜಿಲ್ಲೆ ಎಂದರೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು. ಈ ಎರಡೂ ಜಿಲ್ಲೆಯ ಸುಮಾರು 16 ತಾಲೂಕುಗಳೂ ಸೇರಿದಂತೆ ಇಲ್ಲಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಭಾಗವಾದ ಮಂಗಳೂರಿಗೂ ಸಂಪರ್ಕ ಕಲ್ಪಿಸುವ ರಾಜ್ಯದ ಅತಿದೊಡ್ಡ ರಸ್ತೆ ಸಾರಿಗೆ ಸಂಪರ್ಕ ಜಾಲದಲ್ಲೊಂದಾದ ಸಹಕಾರ ಸಾರಿಗೆ ಇಂದು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲದೆ, ಸರ್ಕಾರದ ಅಸಹಕಾರಕ್ಕೆ ಬೇಸತ್ತು ಫೆಬ್ರವರಿ 17 ರಿಂದ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಬೆಟ್ಟಗುಡ್ಡಗಳ ಇಣುಕಿನಲ್ಲಿ, ಸರಿಯಾದ ರಸ್ತೆ ವ್ಯವಸ್ಥೆಯೂ ಇಲ್ಲದ ಕಲ್ಲುಕಣ್ಣಿನ ಮಲೆನಾಡಿನ ರಸ್ತೆಗಳಲ್ಲಿ ಕೆಎಸ್‍ಆರ್‍ಟಿಸಿ ಸೇವೆಯನ್ನು ಆರಂಭಿಸಲು ಸರ್ಕಾರವೇ ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕರರೇ ಮಾಲೀಕರಾಗಿ ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಮಲೆನಾಡಿನ ಪ್ರತಿ ಮೂಲೆಮೂಲೆಗೂ, ಪ್ರತಿ ಹಳ್ಳಿಗೂ ಸಾರಿಗೆ ಸೇವೆಯನ್ನು ತಲುಪಿದ ಕೀರ್ತಿ ಮತ್ತು ಶ್ರೇಯ ಸಹಕಾರ ಸಾರಿಗೆಗೆ ಸಲ್ಲುತ್ತದೆ.

ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಸೇವೆ ಎಂದೇ ಪರಿಗಣಿಸುತ್ತದೆ. ಆದರೆ ಸರ್ಕಾರ ಇದನ್ನು ನಿಜಕ್ಕೂ ಪಾಲಿಸುತ್ತದೆಯೋ ಇಲ್ಲವೋ? ಆದರೆ, ಇದನ್ನು ರಾಜ್ಯದ ಮಟ್ಟಿಗೆ ನಿಜವಾಗಿಯೂ ಪಾಲಿಸಿದ್ದು ಸಹಕಾರ ಸಾರಿಗೆ. ಇಂದು ದೇಶ-ವಿದೇಶದಲ್ಲಿ ಉನ್ನತ ಮಟ್ಟದ ನಾನಾ ಕೆಲಸದಲ್ಲಿರುವ ವಿದ್ಯಾರ್ಥಿಗಳು ಇದೇ ಸಹಕಾರ ಸಾರಿಗೆ ರಿಯಾಯಿತಿ ಬಸ್ ಪಾಸ್‍ನಲ್ಲಿ ಓಡಾಡಿದವರು. ಇನ್ನೂ ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು ವಿಕಲಚೇತನರಿಗೆ ಶೇ.50 ರಷ್ಟು ರಿಯಾಯಿತಿ ನೀಡಿದ ಮೊದಲ ಖಾಸಗಿ ಸಾರಿಗೆ ಸಂಸ್ಥೆ ಎಂಬ ಖ್ಯಾತಿಯೂ ಸಹಕಾರಿ ಸಾರಿಗೆಗೆ ಇದೆ.

ಹೀಗೆ ಮಲೆನಾಡು ಭಾಗದ ಇಂಚಿಂಚೂ ಓಡಾಡಿ ಅಕ್ಷರಶಃ ಜನರ ಜೀವನಾಡಿಯೇ ಆಗಿಹೋದ ಸಹಕಾರ ಸಾರಿಗೆ ಇಂದು ತನ್ನ ಸೇವೆಯನ್ನೇ ಸ್ಥಗಿತಗೊಳಿಸಿದೆ. ಸಹಕಾರ ವಿಭಾಗದಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದ ಸಾರಿಗೆ ವ್ಯವಸ್ಥೆ ಇಂದು ಅಕ್ಷರಶಃ ಇತಿಹಾಸ ಪುಟಕ್ಕೆ ಸೇರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.

ಈ ಹಿನ್ನೆಲೆ ಸಹಕಾರ ಸಾರಿಗೆ ವ್ಯವಸ್ಥೆಯ ಇತಿಹಾಸ ಹಿನ್ನೆಲೆ ಏನು? ಮಲೆನಾಡು ಭಾಗದಲ್ಲಿ ಈ ಸಂಸ್ಥೆ ಸೃಷ್ಟಿಸಿರುವ ಇತಿಹಾಸ ಎಂಥಾದ್ದು? ಈಗನ ನಷ್ಟಕ್ಕೆ ಕಾರಣವೇನು? ಈ ಸಂಸ್ಥೆಯ ಸಂಕಷ್ಟಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಹಕಾರ ಸಾರಿಗೆ ಹಿನ್ನೆಲೆ ಮತ್ತು ಇತಿಹಾಸ
ಮಲೆನಾಡಿನಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶಂಕರ್ ಟ್ರಾನ್ಸ್ಪೋರ್ಟ್ ಕಂಪೆನಿ 1991ರಲ್ಲಿ ನಷ್ಟದ ಕಾರಣ ಮುಚ್ಚಲಾಯಿತು. ಈ ವೇಳೆ ಕಂಪೆನಿಯಲ್ಲಿ ಕೆಲಸ ನಿರ್ವಹಿಸಿದ್ದ ಸುಮಾರು 300 ಕಾರ್ಮಿಕರ ಬದುಕು ಬೀದಿಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ದಿವಂಗತ ಬಿ.ಕೆ. ಸುಂದರೇಶ್ ಮತ್ತು ಹೋರಾಟಗಾರ ಸಿರಿಮನೆ ನಾಗರಾಜ್ ಇದೇ ಕಾರ್ಮಿಕರನ್ನು ಒಟ್ಟುಗೂಡಿಸಿ ಎಲ್ಲರೂ ತಮ್ಮ ಕೈಲಾದ ಹಣವನ್ನು ಕ್ರೋಢೀಕರಿಸಿ ಕೇವಲ 12 ಲಕ್ಷ ರೂ. ಬಂಡವಾಳದಲ್ಲಿ ಹುಟ್ಟು ಹಾಕಿದ ಸಂಸ್ಥೆಯೇ ಸಹಕಾರ ಸಾರಿಗೆ ಸಂಸ್ಥೆ. ಭಾಗಶಃ ಇಡೀ ದೇಶದಲ್ಲೇ ಕಾರ್ಮಿಕರೇ ಮಾಲೀಕರಾಗಿ ಆರಂಭಿಸಿದ ಮೊದಲ ಸಂಸ್ಥೆ ಇದು.

ಸಂಸ್ಥೆಯಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ತಾನೇ ಮಾಲೀಕ ಎಂಬಂತೆ ಹಗಲಿರುಳು ಶ್ರಮಿಸಿದ ಫಲವಾಗಿ 6 ಬಸ್‍ಗಳಿಂದ ಆರಂಭವಾದ ಸಂಸ್ಥೆಯಲ್ಲಿ ಇಂದು 76 ಬಸ್‍ಗಳಿವೆ. ಕೊಪ್ಪದಲ್ಲಿ ಕೇಂದ್ರ ಕಚೇರಿ ಇದ್ದರೆ, ಕೊಪ್ಪ ಮತ್ತು ಶೃಂಗೇರಿ ಎರಡು ಕಡೆಗಳಲ್ಲಿ ಸ್ವಂತ ಗ್ಯಾರೇಜ್ ಅನ್ನು ಈ ಸಂಸ್ಥೆ ಹೊಂದಿದೆ.

ಮಲೆನಾಡಿನ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ನೌಕರ ವರ್ಗ ಹಾಗೂ ಪ್ರವಾಸಿಗರು ಸೇರಿದಂತೆ ಅನೇಕರು ಕಳೆದ 3 ದಶಕಗಳಿಂದ ಈ ಸಾರಿಗೆಯನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಂಚಾರ, ಸಮಯ ಪಾಲನೆ ಹಾಗೂ ಶಿಸ್ತಿಗೆ ಈ ಸಂಸ್ಥೆ ಹೆಸರುವಾಸಿ. ಆದರೆ, 2017ರಲ್ಲಿ ಬೆಳ್ಳಿಹಬ್ಬ ಆಚರಿಸಿದ ಈ ಸಂಸ್ಥೆ ಕೇವಲ ಮೂರು ವರ್ಷದಲ್ಲಿ ಇದೀಗ ನಷ್ಟದ ಸುಳಿಯಲ್ಲಿ ಸಿಲುಕಿ ಏದುಸಿರು ಬಿಡುತ್ತಿದೆ.

ಸಂಸ್ಥೆಯ ನಷ್ಟಕ್ಕೆ ಕಾರಣವೇನು?
ಕಳೆದ ಮೂರು ನಾಲ್ಕು ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸಲಾಗುತ್ತಿದೆ. ಆದರೆ, 2013ರಿಂದ ಸಹಕಾರಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸಲಾಗಿಲ್ಲ. ಇದರಿಂದ ಸಂಸ್ಥೆಯ ಆದಾಯ ಕುಂಠಿತವಾಗಿದೆ. ಅಲ್ಲದೆ, ಡೀಸೆಲ್ ಬೆಲೆ ಏರಿಕೆಯಿಂದಲೇ ಪ್ರತಿ ತಿಂಗಳು ಕನಿಷ್ಟ 24 ಲಕ್ಷ ಹಣ ಸಂಸ್ಥೆಗೆ ನಷ್ಟವಾಗುತ್ತಿದೆ ಎನ್ನಲಾಗುತ್ತಿದೆ.

ಇದರ ಜೊತೆಗೆ ವರ್ಷಕ್ಕೆ 1.5 ಕೋಟಿ ಹಣವನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿ ಮಾಡಲಾಗುತ್ತಿದೆ. ಇನ್ನೂ ಬಸ್ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳು , ವಿಕಲಚೇತನರು, ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗವಹಿಸಿದವರಿಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪರಿಣಾಮ ಸಂಸ್ಥೆಗೆ ಆರ್ಥಿಕ ಹೊರೆ ಅಧಿಕವಾಗಿದ್ದು, ಪ್ರತಿ ತಿಂಗಳ ಖರ್ಚನ್ನು ನಿಭಾಯಿಸುವುದೇ ದುಸ್ತರವಾಗಿದೆ ಎನ್ನುತ್ತಾರೆ ಸಂಸ್ಥೆಯ ಪದಾಧಿಕಾರಿಗಳು.

ಸರ್ಕಾರದ ಎದುರು ಸಂಸ್ಥೆ ಇಟ್ಟಿರುವ ಬೇಡಿಕೆ ಏನು?
ಸಹಕಾರ ಸಾರಿಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಿದೆ. ಈ ಪೈಕಿ ಸರ್ಕಾರ ಪ್ರತಿವರ್ಷ ರಿಯಾಯಿತಿ ಪಾಸ್ ಬಾಬ್ತು 6.6 ಕೋಟಿ ಹಣವನ್ನು ಸಂಸ್ಥೆಗೆ ಪಾವತಿ ಮಾಡಬೇಕು. ಆದರೆ, ಈವರೆಗೆ ಈ ಹಣ ಬಿಡುಗಡೆಯಾಗಿಲ್ಲ.

ಇದಲ್ಲದೆ, ಸಂಸ್ಥೆಯ ಬಸ್‍ಗಳ ಡೀಸೆಲ್ ಖರೀದಿಯಲ್ಲಿ ತೆರಿಗೆ ವಿನಾಯಿತಿ ನೀಡಬೇಕು, ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಸಹಕಾರ ತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರ ಸಾರಿಗೆಗೂ ನೀಡಬೇಕು ಎಂಬುದು ಸಂಸ್ಥೆಯ ಬೇಡಿಕೆ. ಆದರೆ, ಈವರೆಗೆ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಿಲ್ಲ ಎಂಬುದೇ ದುರದೃಷ್ಟಕರ ಸಂಗತಿ.

ಮಲೆನಾಡಿನ ಈ ಸಹಕಾರ ಸಾರಿಗೆಯ ಸೇವಾ ಮನೋಭಾವವನ್ನು ಜಪಾನ್ ಸರ್ಕಾರ ಮೆಚ್ಚಿಕೊಂಡಿತ್ತು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಡಾಕ್ಟರೇಟ್ ಪದವಿ ಪಡೆದರು, ಮಣಿಪಾಲ್ ಸ್ನಾತಕೋತ್ತರ ಪದವಿಗೆ ಸಹಕಾರ ಸಾರಿಗೆ ಪಠ್ಯವಾಗಿಯೇ ಬದಲಾಗಿತ್ತು. ಇನ್ನೂ ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಯ ಇದರ ಮೇಲಿನ ಸಂಶೋಧನೆಗೆ ಪಿಹೆಚ್ಡಿ ಪದವಿಯನ್ನು ಪ್ರದಾನ ಮಾಡಿತ್ತು.

ಆದರೆ, ಇಷ್ಟೆಲ್ಲಾ ಶ್ರೇಯಕ್ಕೆ ಪಾತ್ರವಾದ ಸಹಕಾರ ಸಾರಿಗೆ ಇಂದು ಅಳಿವಿನ ಅಂಚಿನಲ್ಲಿದೆ, ಇತಿಹಾಸದ ಕಾಲಗರ್ಭ ಸೇರಲು ಅವಸರಿಸುತ್ತಿದೆ ಎಂಬ ವಿಚಾರವನ್ನು ಜೀರ್ಣಿಸಿಕೊಳ್ಳುವುದು ನಿಜಕ್ಕೂ ಕಷ್ಟದಾಯಕವಾದ ವಿಚಾರ. ಅಲ್ಲದೆ, ಮಲೆನಾಡಿಗರ ಅತೀ ಅವಶ್ಯಕವಾದ ವಿಚಾರಗಳಲ್ಲಿ ಸಹಕಾರ ಸಾರಿಗೆ ಪ್ರಮುಖವಾದದ್ದು. ಹೀಗಾಗಿ ಸರ್ಕಾರ ಈ ಸಂಸ್ಥೆಯ ಪುನಶ್ಚೇತನಕ್ಕೆ ಸಹಕಾರ ನೀಡಲೇಬೇಕಿದೆ.

ನಷ್ಟಕ್ಕೆ ಸರ್ಕಾರವೇ ಕಾರಣ ಹೊರತು ಸಹಕಾರಿ ಸಾರಿಗೆಯಲ್ಲ- ಸಿರಿಮನೆ ನಾಗರಾಜ್

ಸಹಕಾರಿ ಸಂಸ್ಥೆಯ ಸದಸ್ಯರು ಸದ್ಯಕ್ಕೆ ಧರಣಿ ಕೂತಿದ್ದಾರೆ. ಕೆ.ಎಸ್.ಆರ್.ಟಿ.ಸಿಗೆ ನೀಡುವ ಸವಲತ್ತುಗಳನ್ನು ನಮಗೂ ನೀಡಿ ಎಂಬುದು ಅವರ ಬೇಡಿಕೆ. ಏಕೆಂದರೆ ಸಹಕಾರಿ ಸಾರಿಗೆಯವರು ಲಾಭ ನಷ್ಟದ ಯೋಚನೆಯಿಲ್ಲದೇ ಸಾಮಾಜಿಕ ಜವಾಬ್ದಾರಿ ಎಂದು ತಿಳಿದು ಮಲೆನಾಡಿನ ದೂರ ದೂರದ ಹಳ್ಳಿಗಳಿಗೂ ಬಸ್ ಸೌಲಭ್ಯ ನೀಡಿದ್ದಾರೆ. ಅಲ್ಲದೇ ಶಾಲಾಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗೆ ಬಹಳಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ.

ಸದ್ಯ ಸರ್ಕಾರದ ನಿಷ್ಕ್ರಿಯತೆ ಮತ್ತು ನಿಷ್ಕಾಳಜಿಯಿಂದು ಒಂದು ವೇಳೆ ಈ ಸಹಕಾರಿ ಸಾರಿಗೆ ಮುಚ್ಚಿಹೋದರೆ ಅರ್ಧ ಮಲೆನಾಡು ಸಮರ್ಪಕ ಸಂಪರ್ಕವಿಲ್ಲದೇ ಸ್ತಬ್ದವಾಗುವುದರಲ್ಲಿ ಅನುಮಾನವಿಲ್ಲ. ಸಹಕಾರಿ ಸಂಸ್ಥೆಯ ನಷ್ಟಕ್ಕೆ ಮಿಸ್ ಮ್ಯಾನೇಜ್‍ಮೆಂಟ್, ಹಣದ ದುರ್ಬಳಕೆ ಕಾರಣವಲ್ಲ. ಡೀಸೆಲ್ ಸಬ್ಸಿಡಿ, ರಸ್ತೆ ತೆರಿಗೆ ವಿನಾಯಿತಿಯಂತಹ ಹಲವು ಸರ್ಕಾರದ ಸವಲತ್ತುಗಳು ಸಿಗದಿರುವುದು, ಡಿಸೇಲ್ ಬೆಲೆ ದಿನೇ ದಿನೇ ಏರುತ್ತಿರುವುದು ಕಾರಣವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಐತಿಹಾಸಿಕ ಸಹಕಾರಿ ಸಾರಿಗೆಯನ್ನು ಉಳಿಸಬೇಕು. ಅವರ ಹೋರಾಟಕ್ಕೆ ನಾನು ಸಂಪೂರ್ಣವಾಗಿ ಬೆಂಬಲ ಕೊಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...