Homeಮುಖಪುಟಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಘಟನೆ ಕುರಿತು ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಕಳೆದ ಗುರುವಾರ ಉತ್ತರ ಪ್ರದೇಶ ಪೊಲೀಸರ ಹಲ್ಲೆ, ಅಧಿಕಾರಿಗಳ ವರ್ತನೆ ಭಾರಿ ಟೀಕೆಗೆ ಗುರಿಯಾಗಿತ್ತು.

ಎರಡನೇ ಬಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್‌ಗೆ ತೆರಳುವಾಗ ದೆಹಲಿ-ಯುಪಿ ಗಡಿಯಲ್ಲಿ ಅವರ ಕುರ್ತಾ(ಬಟ್ಟೆ) ಹಿಡಿದುಕೊಂಡಿದ್ದ ಪೊಲೀಸ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಚಿತ್ರ ವೈರಲ್ ಆಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮೇಲೆ ಒತ್ತಡ ಉಂಟುಮಾಡಿತ್ತು.

ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷೆ ಚಿತ್ರಾ ವಾಘ್ ಪ್ರಿಯಾಂಕಾ ಗಾಂಧಿಯವರ ಮೇಲೆ ನಡೆದ ಹಲ್ಲೆ ಮತ್ತು ದೌರ್ಜನ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಚಿತ್ರಾ ವಾಘ್ ”ಮಹಿಳಾ ನಾಯಕಿಯ ಬಟ್ಟೆಗೆ ಕೈಹಾಕಲು ಪುರುಷ ಪೊಲೀಸರಿಗೆ ಎಷ್ಟು ಧೈರ್ಯ..? ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಮಹಿಳೆಯರ ಘನತೆ ಬಗ್ಗೆ ಕಾಳಜಿವಹಿಸಬೇಕು. ಭಾರತೀಯ ಸಂಸ್ಕೃತಿಯನ್ನು ನಂಬುವ ಮುಖ್ಯಮಂತ್ರಿ ಆದಿತ್ಯನಾಥ್ ಈ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿ ಮಾಡಲು ಪ್ರಿಯಾಂಕಾ ಗಾಂಧಿ ಮತ್ತು ಅವರ ಸಹೋದರ ರಾಹುಲ್ ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಶನಿವಾರ ಮಧ್ಯಾಹ್ನ ಹತ್ರಾಸ್‌ಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದರು.

ದೆಹಲಿ-ಯುಪಿ ಗಡಿಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗೌತಮ್ ಬುದ್ಧ ನಗರ (ನೋಯ್ಡಾ) ಪೊಲೀಸರ ನಡುವೆ ಜಟಾಪಟಿ ಸಂಭವಿಸಿತ್ತು. ಘಟನೆಯಲ್ಲಿ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಲು ಮುಂದಾದಾಗ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಕಾರ್ಯಕರ್ತರ ರಕ್ಷಣೆಗೆ ಮುಂದಾಗಿದ್ದರು. ಈ ಸಮಯದಲ್ಲಿ ಹೆಲ್ಮೆಟ್ ಧರಿಸಿದ ಪೊಲೀಸರು ಡಿಎನ್‌ಎ ಟೋಲ್ ಪ್ಲಾಜಾ ಬಳಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಧರಿಸಿದ್ಧ ಕುರ್ತಾಕ್ಕೆ ಕೈ ಹಾಕಿ ಹಿಡಿದಿದ್ದರು.

ಇದನ್ನೂ ಓದಿ: ಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

ಹಿಂದಿ ಭಾಷೆಯಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ನಾಯಕಿ ಚಿತ್ರಾ ವಾಘ್, “ಮಹಿಳಾ ರಾಜಕೀಯ ನಾಯಕಿಯ ಬಟ್ಟೆಗಳ ಮೇಲೆ ಪುರುಷ ಪೊಲೀಸ್ ಅಧಿಕಾರಿ ಕೈ ಹಾಕಲು ಎಷ್ಟು ಧೈರ್ಯ!” ಪೊಲೀಸರು ಯಾವಾಗಲೂ ತಮ್ಮ ಮಿತಿಗಳನ್ನು ಗಮನದಲ್ಲಿರಿಸಿಕೊಳ್ಳಬೇಕು’ ಎಂದಿದ್ದಾರೆ.

“ಭಾರತೀಯ ಸಂಸ್ಕೃತಿಯನ್ನು ನಂಬುವ ಯೋಗಿ ಆದಿತ್ಯನಾಥ್ ಜಿ, ಅಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಟ್ವೀಟ್ ಜೊತೆಗೆ, ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಪೊಲೀಸ್ ಸಿಬ್ಬಂದಿ ಹಿಡಿದು ಎಳೆಯುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕಿಯ ನಿಲುವನ್ನು ಮಹಾರಾಷ್ಟ್ರ ಯುವ ಕಾಂಗ್ರೆಸ್ ಮುಖ್ಯಸ್ಥ ಸತ್ಯಜಿತ್ ತಂಬೆ ಶ್ಲಾಘಿಸಿದ್ದಾರೆ.

 

ಕಳೆದ ವರ್ಷ ಬಿಜೆಪಿಗೆ ಸೇರಲು ಎನ್‌ಸಿಪಿಯನ್ನು ತೊರೆದ ಚಿತ್ರ ವಾಘ್ ಅವರು ತಮ್ಮ ಪಕ್ಷವನ್ನು ಬದಲಾಯಿಸಿದರೂ ತಮ್ಮ “ಸಂಸ್ಕಾರ” ಕ್ಕೆ ಅಂಟಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ತನಿಖೆಗೆ ಆದೇಶ

ಘಟನೆ ನಡೆದ ನಂತರ ಹಲ್ಲೆಯ ಚಿತ್ರಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ವ್ಯಾಪಕ ಟೀಕಗಳು ಕೇಳಿಬಂದಿವೆ. ಹಾಗಾಗಿ ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...