HomeಮುಖಪುಟCOP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

COP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

- Advertisement -
- Advertisement -

ದುಬೈಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆ(COP28)ಯಲ್ಲಿ ಪಳೆಯುಳಿಕೆ ಇಂಧನವನ್ನು ಹಂತ ಹಂತವಾಗಿ ಕಡಿತಗೊಳಿಸುವ ಪ್ರಸ್ತಾವನೆಗೆ ದೇಶಗಳಲ್ಲಿ ಸಹಮತ ಮೂಡಲಿಲ್ಲ ಎಂದು ವರದಿಗಳು ಹೇಳಿವೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಇವುಗಳ ಬಳಕೆ ಹಂತ ಹಂತವಾಗಿ ಕಡಿತಗೊಳಿಸಿ ಹೊರ ಸೂಸುವಿಕೆಯನ್ನು ತಡೆಯುವುದು. ಈ ಮೂಲಕ ಈ ಶತಮಾನದ ಅಂತ್ಯದ ವೇಳೆಗೆ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು ದುಬೈ ಹವಾಮಾನ ಶೃಂಗಸಭೆಯ ಮುಖ್ಯ ಅಜೆಂಡಾವಾಗಿದೆ. ಆದರೆ, ಶೃಂಗಸಭೆ ಅಂತ್ಯಗೊಳ್ಳುವ ಹಂತಕ್ಕೆ ಬಂದರೂ ಪಳೆಯುಳಿಕೆ ಇಂಧನಗಳ ಕಡಿತದ ಕುರಿತು ರಾಷ್ಟ್ರಗಳ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದು ಬಂದಿದೆ.

ಪಳೆಯುಳಿಕೆ ಇಂಧನ ಕಡಿತದ ಬಗ್ಗೆ ಶೃಂಗಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಪ್ರಮುಖ ತೈಲ ಉತ್ಪಾದಕ ದೇಶಗಳಾದ ಸೌದಿ ಅರೆಬಿಯಾ ಮತ್ತು ರಷ್ಯಾ ವಿರೋಧ ವ್ಯಕ್ತಪಡಿಸಿವೆ. ನಿರ್ದಿಷ್ಟವಾಗಿ ತೈಲ, ಅನಿಲ ಮತ್ತು ಕಲ್ಲಿದ್ದಲನ್ನು ಗುರಿಯಾಗಿಸುವ ಬದಲು, ಸಾಮಾನ್ಯ ಅರ್ಥದಲ್ಲಿ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದರ ಮೇಲೆ ಗಮನ ಹರಿಸಬೇಕೆಂದು ಇವುಗಳು ಪ್ರತಿಪಾದಿಸಿವೆ.

ಶೃಂಗಸಭೆಯ ಅಂತಿಮ ನಿರ್ಣಯದಲ್ಲಿ ಪಳೆಯುಳಿಕೆ ಇಂಧನಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ಬೆಂಬಲಿಸದಂತೆ ಕೋರಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ‘ಒಪೆಕ್’ ತನ್ನ ಸದಸ್ಯರು ಮತ್ತು ಮಿತ್ರರಾಷ್ಟ್ರಗಳಿಗೆ ಪತ್ರ ಬರೆದಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೆ ವಿರುದ್ಧವಾಗಿ ಅಮೆರಿಕ, ಯುರೋಪಿಯನ್ ಯೂನಿಯನ್ ಸೇರಿದಂತೆ ಸುಮಾರು 80 ದೇಶಗಳು ಪಳೆಯುಳಿಕೆ ಇಂಧನ ಬಳಕೆ ಕಡಿತಗೊಳಿಸುವ ನಿಟ್ಟಿನಲ್ಲಿ ಬೆಂಬಲ ವ್ಯಕ್ತಡಿಸಿವೆ. ಸಣ್ಣ ದ್ವೀಪಗಳ ಪರವಾಗಿ ವಾದ ಮಂಡಿಸಿದ ಮಾರ್ಷಲ್ ದ್ವೀಪ ಸಮೂಹ, ಪಳೆಯುಳಿಕೆ ಇಂಧನಗಳ ಬಳಕೆಯಿಂದ ಉಂಟಾಗುವ ಸಮುದ್ರ ಮಟ್ಟದ ಏರಿಕೆಯಂತಹ ಅಸ್ತಿತ್ವದ ಅಪಾಯವನ್ನು ಒತ್ತಿ ಹೇಳಿದೆ.

ಈ ಬಾರಿ ದುಬೈ ನಗರದಲ್ಲಿ 28ನೇ ವಿಶ್ವ ಹವಾಮಾನ ಶೃಂಗಸಭೆ (COP28) ನಡೆಯುತ್ತಿದೆ. ನವೆಂಬರ್ 30ರಂದು ಪ್ರಾರಂಭಗೊಂಡ ಈ ಸಭೆ ಡಿಸೆಂಬರ್ 12ರವರೆಗೆ ಮುಂದುವರಿಯಲಿದೆ.

ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಈ ಶೃಂಗಸಭೆಯ ಪ್ರಮುಖ ಉದ್ದೇಶಗಳಾಗಿವೆ.

ಇದನ್ನೂ ಓದಿ : ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...