HomeಮುಖಪುಟCOP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

COP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

- Advertisement -
- Advertisement -

ದುಬೈಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆ(COP28)ಯಲ್ಲಿ ಪಳೆಯುಳಿಕೆ ಇಂಧನವನ್ನು ಹಂತ ಹಂತವಾಗಿ ಕಡಿತಗೊಳಿಸುವ ಪ್ರಸ್ತಾವನೆಗೆ ದೇಶಗಳಲ್ಲಿ ಸಹಮತ ಮೂಡಲಿಲ್ಲ ಎಂದು ವರದಿಗಳು ಹೇಳಿವೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಇವುಗಳ ಬಳಕೆ ಹಂತ ಹಂತವಾಗಿ ಕಡಿತಗೊಳಿಸಿ ಹೊರ ಸೂಸುವಿಕೆಯನ್ನು ತಡೆಯುವುದು. ಈ ಮೂಲಕ ಈ ಶತಮಾನದ ಅಂತ್ಯದ ವೇಳೆಗೆ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು ದುಬೈ ಹವಾಮಾನ ಶೃಂಗಸಭೆಯ ಮುಖ್ಯ ಅಜೆಂಡಾವಾಗಿದೆ. ಆದರೆ, ಶೃಂಗಸಭೆ ಅಂತ್ಯಗೊಳ್ಳುವ ಹಂತಕ್ಕೆ ಬಂದರೂ ಪಳೆಯುಳಿಕೆ ಇಂಧನಗಳ ಕಡಿತದ ಕುರಿತು ರಾಷ್ಟ್ರಗಳ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದು ಬಂದಿದೆ.

ಪಳೆಯುಳಿಕೆ ಇಂಧನ ಕಡಿತದ ಬಗ್ಗೆ ಶೃಂಗಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಪ್ರಮುಖ ತೈಲ ಉತ್ಪಾದಕ ದೇಶಗಳಾದ ಸೌದಿ ಅರೆಬಿಯಾ ಮತ್ತು ರಷ್ಯಾ ವಿರೋಧ ವ್ಯಕ್ತಪಡಿಸಿವೆ. ನಿರ್ದಿಷ್ಟವಾಗಿ ತೈಲ, ಅನಿಲ ಮತ್ತು ಕಲ್ಲಿದ್ದಲನ್ನು ಗುರಿಯಾಗಿಸುವ ಬದಲು, ಸಾಮಾನ್ಯ ಅರ್ಥದಲ್ಲಿ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದರ ಮೇಲೆ ಗಮನ ಹರಿಸಬೇಕೆಂದು ಇವುಗಳು ಪ್ರತಿಪಾದಿಸಿವೆ.

ಶೃಂಗಸಭೆಯ ಅಂತಿಮ ನಿರ್ಣಯದಲ್ಲಿ ಪಳೆಯುಳಿಕೆ ಇಂಧನಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ಬೆಂಬಲಿಸದಂತೆ ಕೋರಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ‘ಒಪೆಕ್’ ತನ್ನ ಸದಸ್ಯರು ಮತ್ತು ಮಿತ್ರರಾಷ್ಟ್ರಗಳಿಗೆ ಪತ್ರ ಬರೆದಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೆ ವಿರುದ್ಧವಾಗಿ ಅಮೆರಿಕ, ಯುರೋಪಿಯನ್ ಯೂನಿಯನ್ ಸೇರಿದಂತೆ ಸುಮಾರು 80 ದೇಶಗಳು ಪಳೆಯುಳಿಕೆ ಇಂಧನ ಬಳಕೆ ಕಡಿತಗೊಳಿಸುವ ನಿಟ್ಟಿನಲ್ಲಿ ಬೆಂಬಲ ವ್ಯಕ್ತಡಿಸಿವೆ. ಸಣ್ಣ ದ್ವೀಪಗಳ ಪರವಾಗಿ ವಾದ ಮಂಡಿಸಿದ ಮಾರ್ಷಲ್ ದ್ವೀಪ ಸಮೂಹ, ಪಳೆಯುಳಿಕೆ ಇಂಧನಗಳ ಬಳಕೆಯಿಂದ ಉಂಟಾಗುವ ಸಮುದ್ರ ಮಟ್ಟದ ಏರಿಕೆಯಂತಹ ಅಸ್ತಿತ್ವದ ಅಪಾಯವನ್ನು ಒತ್ತಿ ಹೇಳಿದೆ.

ಈ ಬಾರಿ ದುಬೈ ನಗರದಲ್ಲಿ 28ನೇ ವಿಶ್ವ ಹವಾಮಾನ ಶೃಂಗಸಭೆ (COP28) ನಡೆಯುತ್ತಿದೆ. ನವೆಂಬರ್ 30ರಂದು ಪ್ರಾರಂಭಗೊಂಡ ಈ ಸಭೆ ಡಿಸೆಂಬರ್ 12ರವರೆಗೆ ಮುಂದುವರಿಯಲಿದೆ.

ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಈ ಶೃಂಗಸಭೆಯ ಪ್ರಮುಖ ಉದ್ದೇಶಗಳಾಗಿವೆ.

ಇದನ್ನೂ ಓದಿ : ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...