HomeಮುಖಪುಟCOP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

COP28 : ಪಳೆಯುಳಿಕೆ ಇಂಧನ ಕಡಿತಕ್ಕೆ ಮೂಡದ ಒಮ್ಮತ

- Advertisement -
- Advertisement -

ದುಬೈಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆ(COP28)ಯಲ್ಲಿ ಪಳೆಯುಳಿಕೆ ಇಂಧನವನ್ನು ಹಂತ ಹಂತವಾಗಿ ಕಡಿತಗೊಳಿಸುವ ಪ್ರಸ್ತಾವನೆಗೆ ದೇಶಗಳಲ್ಲಿ ಸಹಮತ ಮೂಡಲಿಲ್ಲ ಎಂದು ವರದಿಗಳು ಹೇಳಿವೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಇವುಗಳ ಬಳಕೆ ಹಂತ ಹಂತವಾಗಿ ಕಡಿತಗೊಳಿಸಿ ಹೊರ ಸೂಸುವಿಕೆಯನ್ನು ತಡೆಯುವುದು. ಈ ಮೂಲಕ ಈ ಶತಮಾನದ ಅಂತ್ಯದ ವೇಳೆಗೆ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು ದುಬೈ ಹವಾಮಾನ ಶೃಂಗಸಭೆಯ ಮುಖ್ಯ ಅಜೆಂಡಾವಾಗಿದೆ. ಆದರೆ, ಶೃಂಗಸಭೆ ಅಂತ್ಯಗೊಳ್ಳುವ ಹಂತಕ್ಕೆ ಬಂದರೂ ಪಳೆಯುಳಿಕೆ ಇಂಧನಗಳ ಕಡಿತದ ಕುರಿತು ರಾಷ್ಟ್ರಗಳ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದು ಬಂದಿದೆ.

ಪಳೆಯುಳಿಕೆ ಇಂಧನ ಕಡಿತದ ಬಗ್ಗೆ ಶೃಂಗಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಪ್ರಮುಖ ತೈಲ ಉತ್ಪಾದಕ ದೇಶಗಳಾದ ಸೌದಿ ಅರೆಬಿಯಾ ಮತ್ತು ರಷ್ಯಾ ವಿರೋಧ ವ್ಯಕ್ತಪಡಿಸಿವೆ. ನಿರ್ದಿಷ್ಟವಾಗಿ ತೈಲ, ಅನಿಲ ಮತ್ತು ಕಲ್ಲಿದ್ದಲನ್ನು ಗುರಿಯಾಗಿಸುವ ಬದಲು, ಸಾಮಾನ್ಯ ಅರ್ಥದಲ್ಲಿ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದರ ಮೇಲೆ ಗಮನ ಹರಿಸಬೇಕೆಂದು ಇವುಗಳು ಪ್ರತಿಪಾದಿಸಿವೆ.

ಶೃಂಗಸಭೆಯ ಅಂತಿಮ ನಿರ್ಣಯದಲ್ಲಿ ಪಳೆಯುಳಿಕೆ ಇಂಧನಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ಬೆಂಬಲಿಸದಂತೆ ಕೋರಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ‘ಒಪೆಕ್’ ತನ್ನ ಸದಸ್ಯರು ಮತ್ತು ಮಿತ್ರರಾಷ್ಟ್ರಗಳಿಗೆ ಪತ್ರ ಬರೆದಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೆ ವಿರುದ್ಧವಾಗಿ ಅಮೆರಿಕ, ಯುರೋಪಿಯನ್ ಯೂನಿಯನ್ ಸೇರಿದಂತೆ ಸುಮಾರು 80 ದೇಶಗಳು ಪಳೆಯುಳಿಕೆ ಇಂಧನ ಬಳಕೆ ಕಡಿತಗೊಳಿಸುವ ನಿಟ್ಟಿನಲ್ಲಿ ಬೆಂಬಲ ವ್ಯಕ್ತಡಿಸಿವೆ. ಸಣ್ಣ ದ್ವೀಪಗಳ ಪರವಾಗಿ ವಾದ ಮಂಡಿಸಿದ ಮಾರ್ಷಲ್ ದ್ವೀಪ ಸಮೂಹ, ಪಳೆಯುಳಿಕೆ ಇಂಧನಗಳ ಬಳಕೆಯಿಂದ ಉಂಟಾಗುವ ಸಮುದ್ರ ಮಟ್ಟದ ಏರಿಕೆಯಂತಹ ಅಸ್ತಿತ್ವದ ಅಪಾಯವನ್ನು ಒತ್ತಿ ಹೇಳಿದೆ.

ಈ ಬಾರಿ ದುಬೈ ನಗರದಲ್ಲಿ 28ನೇ ವಿಶ್ವ ಹವಾಮಾನ ಶೃಂಗಸಭೆ (COP28) ನಡೆಯುತ್ತಿದೆ. ನವೆಂಬರ್ 30ರಂದು ಪ್ರಾರಂಭಗೊಂಡ ಈ ಸಭೆ ಡಿಸೆಂಬರ್ 12ರವರೆಗೆ ಮುಂದುವರಿಯಲಿದೆ.

ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಈ ಶೃಂಗಸಭೆಯ ಪ್ರಮುಖ ಉದ್ದೇಶಗಳಾಗಿವೆ.

ಇದನ್ನೂ ಓದಿ : ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...