Homeಮುಖಪುಟಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

- Advertisement -
- Advertisement -

ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ನಗರದಲ್ಲಿ 28ನೇ ವಿಶ್ವ ಹವಾಮಾನ ಶೃಂಗಸಭೆ (COP28) ನಡೆಯುತ್ತಿದೆ. ನವೆಂಬರ್ 30ರಂದು ಪ್ರಾರಂಭಗೊಂಡ ಈ ಸಭೆ ಡಿಸೆಂಬರ್ 12ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP)ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ ಸದಸ್ಯ ರಾಷ್ಟ್ರಗಳು ಸೇರಿದಂತೆ 70,000 ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP28)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿವಾದಕ್ಕೆ ಕಾರಣವಾದ ದುಬೈ ಶೃಂಗಸಭೆ :

ದುಬೈನಲ್ಲಿ ನಡೆಯುತ್ತಿರುವ ಈ ಬಾರಿಯ ಹವಾಮಾನ ಶೃಂಗಸಭೆ ಆರಂಭಕ್ಕೂ ಮುನ್ನವೇ ವಿವಾದಕ್ಕೆ ಕಾರಣವಾಗಿತ್ತು ಎಂದು ಬಿಬಿಸಿ ವರದಿ ಹೇಳಿದೆ. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಇದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್, ಅವರನ್ನು ಹವಾಮಾನ ಶೃಂಗಸಭೆಯ ಉಸ್ತುವಾರಿಯಾಗಿ ನೇಮಿಸಿದೆ.

ತೈಲ- ಅನಿಲ ಮತ್ತು ಕಲ್ಲಿದ್ದಲು ಇವುಗಳು ಹವಾಮಾನ ಬದಲಾವಣೆಗೆ ಮುಖ್ಯ ಕಾರಣಗಳಾಗಿವೆ. ಇವುಗಳನ್ನು ಸುಟ್ಟಾಗ ಇಂಗಾಲದ ಡೈಆಕ್ಸೈಡ್‌ನಂತಹ ತಾಪಮಾನ ಹೆಚ್ಚಿಸುವ ಹಸಿರುಮನೆ ಅನಿಲಗಳನ್ನು ಬಿಡುಗಡೆ ಮಾಡುತ್ತವೆ. ಸುಲ್ತಾನ್ ಅಲ್-ಜಾಬರ್ ತೈಲ ಕಂಪನಿಯ ಮುಖ್ಯಸ್ಥರಾಗಿ ಅದನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. ಅಂತಹ ವ್ಯಕ್ತಿಯನ್ನು ಹವಾಮಾನ ಶೃಂಗಸಭೆಯ ಉಸ್ತುವಾರಿಯಾಗಿ ನೇಮಿಸಿದ್ದು ಕೆಲ ರಾಷ್ಟ್ರಗಳ ವಿರೋಧಕ್ಕೆ ಕಾರಣವಾಗಿದೆ.

ಇದಲ್ಲದೆ, ಶೃಂಗಸಭೆಯಲ್ಲಿ ಮಾತನಾಡಿದ್ದ ಸುಲ್ತಾನ್ ಅಲ್-ಜಾಬರ್, ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸಲು ಸಾಂಪ್ರದಾಯಿಕ ಇಂಧನ ಬಳಕೆ ತಡೆಗಟ್ಟಬೇಕು ಎನ್ನಲು ಯಾವುದೇ ವಿಜ್ಞಾನದ ಉಲ್ಲೇಖಗಳಿಲ್ಲ ಎಂದಿದ್ದರು. ಇದಕ್ಕೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಡಿಸೆಂಬರ್ 1ರಂದು ಪ್ರಧಾನಿ ನರೇಂದ್ರ ಮೋದಿ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯ ‘ಟ್ರಾನ್ಸ್‌ಫಾರ್ಮಿಂಗ್ ಕ್ಲೈಮೆಟ್ ಫೈನಾನ್ಸ್’ ಕುರಿತ ಅಧಿವೇಶನದಲ್ಲಿ ಮಾತನಾಡಿದ ಮೋದಿ, ವಿಶ್ವದ ಅಭಿವೃದ್ದಿ ಹೊಂದಿದ ರಾಷ್ಟ್ರಗಳು 2050ಕ್ಕಿಂತ ಮೊದಲು ಇಂಗಾಲದ ಡೈ ಆಕ್ಸೈಡ್ ಹೊರ ಸೂಸುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಬಡ ರಾಷ್ಟ್ರಗಳಿಗೆ ಹವಾಮಾನ ಬದಲಾವಣೆ ತಡೆಗಟ್ಟುವ ಗುರಿಗಳನ್ನು ಸಾಧಿಸಲು ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಹೇಳಿದ್ದಾರೆ.

ಹವಾಮಾನ ಶೃಂಗಸಭೆಯಲ್ಲಿ ನಡೆಯುವ ಚರ್ಚೆಗಳೇನು?

ಪ್ಯಾರಿಸ್ ಹವಾಮಾನ ಬದಲಾವಣೆ ಒಪ್ಪಂದದ ಪ್ರಮುಖ ಅಂಶಗಳ ಕುರಿತು ಕಳೆದ ಕೆಲವು ವರ್ಷಗಳಿಂದ ಮಾತುಕತೆ ನಡೆಯುತ್ತಿದೆ. ಈ ಬಾರಿಯ ಶೃಂಗಸಭೆಯಲ್ಲಿ ಒಪ್ಪಂದವನ್ನು ಕಾರ್ಯಗತಗೊಳಿಸುವ ಬಗ್ಗೆ ಮುಖ್ಯವಾಗಿ ಚರ್ಚೆ ನಡೆಯಲಿದೆ. ಹವಾಮಾನ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳುವ ಅತ್ಯಂತ ನಿರ್ಣಾಯಕ ಘಟ್ಟದಲ್ಲಿ ನಾವಿದ್ದೇವೆ ಎಂದು ವಿಶ್ವಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದೆ.

ಹವಾಮಾನ ಬದಲಾವಣೆಯ ವಿಶ್ವಸಂಸ್ಥೆಯ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್‌ನ ಇತ್ತೀಚಿನ ಸಮೀಕ್ಷೆಯು 2019ಕ್ಕೆ ಹೋಲಿಸಿದರೆ 2030 ರ ವೇಳೆಗೆ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು 43% ರಷ್ಟು ಕಡಿಮೆಯಾಗಲಿದೆ ಎಂದು ಹೇಳಿದೆ. ಈ ಶತಮಾನದ ಅಂತ್ಯದ ವೇಳೆಗೆ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು ಮತ್ತು ಆಗಾಗ ಉಂಟಾಗುವ ತೀವ್ರ ಬರ, ಶಾಖದ ಅಲೆಗಳು ಮತ್ತು ಮಳೆ ಸೇರಿದಂತೆ ಹವಾಮಾನ ಬದಲಾವಣೆಯ ಕೆಟ್ಟ ಪರಿಣಾಮಗಳನ್ನು ತಪ್ಪಿಸುವ ಕುರಿತು ಶೃಂಗಸಭೆಯಲ್ಲಿ ಚರ್ಚೆ ನಡೆಯಲಿದೆ.

ಶೃಂಗಸಭೆಯಲ್ಲಿ ನಡೆಯುವ ಸಭೆಗಳು ಯಾವುವು?

ಹವಾಮಾನ ಶೃಂಗಸಭೆ ಪ್ಯಾರಿಸ್ ಒಪ್ಪಂದ ಮತ್ತು ಕ್ಯೋಟೋ ಶಿಷ್ಟಾಚಾರದ ನಿರ್ಧಾರ ತೆಗೆದುಕೊಳ್ಳುವ ಮೂರು ಸಂಸ್ಥೆಗಳ ವಾರ್ಷಿಕ ಸಭೆಗಳನ್ನು ಒಳಗೊಂಡಿದೆ. ಈ ಸಭೆಗಳಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಹವಾಮಾನ ಸಂಬಂಧಿತ ಕಾರ್ಯಸೂಚಿಯ ವಿಷಯಗಳನ್ನು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದಲ್ಲದೆ ಯುಎನ್‌ಎಫ್‌ಸಿಸಿಸಿ ಅಂಗ ಸಂಸ್ಥೆಗಳ ವಾರ್ಷಿಕ ಸಭೆಗಳೂ ನಡೆಯಲಿವೆ.

ಇದನ್ನೂ ಓದಿ : ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...