HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...