HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...