HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...