HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...