HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...