HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...