HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...