HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...