HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...