HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...