HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...