HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...