HomeಮುಖಪುಟCOP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಮೇಲೆ ಯುಎಸ್‌ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮರು ಆಯ್ಕೆಯಾಗಿರುವ ಕಾರ್ಮೋಡ ಆವರಿಸಿದೆ.

ಮತ್ತೆ ಆಯ್ಕೆಯಾದರೆ ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅದರಂತೆ ನಡೆದುಕೊಳ್ಳುವ ಆತಂಕ ಎದುರಾಗಿದೆ.

ಟ್ರಂಪ್ 2016ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದಾಗ ಯುಎಸ್‌ ಅನ್ನು ಪ್ಯಾರಿಸ್ ಒಪ್ಪಂದದಿಂದ ಹೊರಗಿಟ್ಟಿದ್ದರು. ನಾಲ್ಕು ವರ್ಷಗಳ ನಂತರ ಜೋ ಬೈಡೆನ್ ಮತ್ತೆ ಒಪ್ಪಂದದಲ್ಲಿ ಯುಎಸ್‌ ಅನ್ನು ಸೇರಿಸಿದ್ದರು. ಈಗ ಎರಡನೇ ಬಾರಿ ಯುಎಸ್‌ ಅನ್ನು ಟ್ರಂಪ್ ಹೊರಗಿಡುವ ಸಾಧ್ಯತೆ ಇದೆ.

ಈ ಬಾರಿಯ ಹವಾಮಾನ ಶೃಂಗಸಭೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಪಳೆಯುಳಿಕೆ ಇಂಧನಗಳ ಬಳಕೆ ಕಡಿತಗೊಳಿಸುವುದು ಸೇರಿದಂತೆ ತಾಪಮಾನ ಹೆಚ್ಚಳ ನಿಯಂತ್ರಣ ಕ್ರಮಗಳಿಗೆ ಹಣಕಾಸಿನ ನೆರವು (COP FInance) ಒದಗಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಯುತ್ತಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್, ಈ ಎರಡು ಒಪ್ಪಂದಗಳ ಮುಖ್ಯ ಗುರಿ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹವಾಮಾನ ಯೋಜನೆಗಳ ಅನುಷ್ಠಾನಕ್ಕೆ ಮುಂದುವರಿದ ರಾಷ್ಟ್ರಗಳು ಆರ್ಥಿಕ ನೆರವು ಒದಗಿಸುವುದು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿವೆ. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ಹೊಂದಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ಬಾಕುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುಎಸ್‌ನ ಉನ್ನತ ಹವಾಮಾನ ರಾಯಭಾರಿ ಜಾನ್ ಪೊಡೆಸ್ಟಾ ಅವರು “ಟ್ರಂಪ್ ಸರ್ಕಾರ ಹವಾಮಾನ ಕ್ರಮಗಳು ಅಥವಾ ಪ್ಯಾರಿಸ್ ಒಪ್ಪಂದದ ವಿಚಾರದಲ್ಲಿ ಯೂ-ಟರ್ನ್‌ ಹೊಡೆಯಬಹುದು ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಯುಎಸ್‌ನ ನಗರಗಳು, ರಾಜ್ಯಗಳು ಮತ್ತು ಜನರು ಜಾಗತಿಕ ತಾಪಮಾನ ತಗ್ಗಿಸುವ ವಿಚಾರದಲ್ಲಿ ಬದ್ದತೆಯ ಪ್ರಯತ್ನ ಮುಂದುವರೆಸಲಿದ್ದಾರೆ” ಎಂದು ಹೇಳಿದ್ದಾಗಿ ಎಎಫ್‌ಪಿ ವರದಿ ಮಾಡಿದೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತು.

ಯುಎಸ್ ಅಥವಾ ಅಮೆರಿಕ ದೊಡ್ಡ ಆರ್ಥಿಕ ದೇಶವಾದ್ದರಿಂದ ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್ ಒಪ್ಪಂದಗಳ ಗುರಿ ತಲುಪಲು ಅದರ ಸಹಭಾಗಿತ್ವ ಅಗತ್ಯವಾಗಿದೆ. ಅದರೆ, ಯುಎಸ್ ಹೊರ ನಡೆದರೆ, ಇತರ ದೇಶಗಳು ಅದನ್ನು ಹಿಂಬಾಲಿಸಬಹುದು. ಈ ಮೂಲಕ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಮಾಡಿದ ಶ್ರಮಗಳು ವ್ಯರ್ಥವಾಗಬಹುದು. ಭಾರತದಂತಹ ರಾಷ್ಟ್ರಗಳು ಸರಿಯಾದ ಆರ್ಥಿಕ ನೆರವು ಸಿಗದೆ ಹವಾಮಾನ ಯೋಜನೆಗಳ ಅನುಷ್ಠಾನಗೊಳಿಸಲು ವಿಫಲವಾಗಬಹುದು. ಈಗ ನಡೆಯುತ್ತಿರುವ COP ಯಂತಹ ಹವಾಮಾನ ಚರ್ಚೆಗಳು ಸ್ಥಗಿತಗೊಳ್ಳಬಹುದು. ಬಹು ಮುಖ್ಯವಾಗಿ ಯುಎಸ್‌ ತಾನು ಹೊರ ಹೋಗುವುದಲ್ಲದೆ ಇತರ ರಾಷ್ಟ್ರಗಳನ್ನು ತನ್ನ ಜೊತೆ ಕರೆದೊಯ್ಯಬಹುದು.

ಒಟ್ಟಿನಲ್ಲಿ, ಟ್ರಂಪ್ ಮರು ಆಯ್ಕೆಯ ಕಾರ್ಮೋಡ ಹವಾಮಾನ ಯೋಜನೆಗಳ ಮೇಲೆ ಆವರಿಸಿದೆ. ಟ್ರಂಪ್ ಆಡಳಿತದ ಹವಾಮಾನ ತಂತ್ರವು ಜನವರಿ 20ರಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರವೇ ಸ್ಪಷ್ಟವಾಗಿ ತಿಳಿಯಲಿದೆ.

ಇದನ್ನೂ ಓದಿ | COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...