HomeಮುಖಪುಟCOP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಮೇಲೆ ಯುಎಸ್‌ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮರು ಆಯ್ಕೆಯಾಗಿರುವ ಕಾರ್ಮೋಡ ಆವರಿಸಿದೆ.

ಮತ್ತೆ ಆಯ್ಕೆಯಾದರೆ ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅದರಂತೆ ನಡೆದುಕೊಳ್ಳುವ ಆತಂಕ ಎದುರಾಗಿದೆ.

ಟ್ರಂಪ್ 2016ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದಾಗ ಯುಎಸ್‌ ಅನ್ನು ಪ್ಯಾರಿಸ್ ಒಪ್ಪಂದದಿಂದ ಹೊರಗಿಟ್ಟಿದ್ದರು. ನಾಲ್ಕು ವರ್ಷಗಳ ನಂತರ ಜೋ ಬೈಡೆನ್ ಮತ್ತೆ ಒಪ್ಪಂದದಲ್ಲಿ ಯುಎಸ್‌ ಅನ್ನು ಸೇರಿಸಿದ್ದರು. ಈಗ ಎರಡನೇ ಬಾರಿ ಯುಎಸ್‌ ಅನ್ನು ಟ್ರಂಪ್ ಹೊರಗಿಡುವ ಸಾಧ್ಯತೆ ಇದೆ.

ಈ ಬಾರಿಯ ಹವಾಮಾನ ಶೃಂಗಸಭೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಪಳೆಯುಳಿಕೆ ಇಂಧನಗಳ ಬಳಕೆ ಕಡಿತಗೊಳಿಸುವುದು ಸೇರಿದಂತೆ ತಾಪಮಾನ ಹೆಚ್ಚಳ ನಿಯಂತ್ರಣ ಕ್ರಮಗಳಿಗೆ ಹಣಕಾಸಿನ ನೆರವು (COP FInance) ಒದಗಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಯುತ್ತಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್, ಈ ಎರಡು ಒಪ್ಪಂದಗಳ ಮುಖ್ಯ ಗುರಿ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹವಾಮಾನ ಯೋಜನೆಗಳ ಅನುಷ್ಠಾನಕ್ಕೆ ಮುಂದುವರಿದ ರಾಷ್ಟ್ರಗಳು ಆರ್ಥಿಕ ನೆರವು ಒದಗಿಸುವುದು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿವೆ. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ಹೊಂದಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ಬಾಕುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುಎಸ್‌ನ ಉನ್ನತ ಹವಾಮಾನ ರಾಯಭಾರಿ ಜಾನ್ ಪೊಡೆಸ್ಟಾ ಅವರು “ಟ್ರಂಪ್ ಸರ್ಕಾರ ಹವಾಮಾನ ಕ್ರಮಗಳು ಅಥವಾ ಪ್ಯಾರಿಸ್ ಒಪ್ಪಂದದ ವಿಚಾರದಲ್ಲಿ ಯೂ-ಟರ್ನ್‌ ಹೊಡೆಯಬಹುದು ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಯುಎಸ್‌ನ ನಗರಗಳು, ರಾಜ್ಯಗಳು ಮತ್ತು ಜನರು ಜಾಗತಿಕ ತಾಪಮಾನ ತಗ್ಗಿಸುವ ವಿಚಾರದಲ್ಲಿ ಬದ್ದತೆಯ ಪ್ರಯತ್ನ ಮುಂದುವರೆಸಲಿದ್ದಾರೆ” ಎಂದು ಹೇಳಿದ್ದಾಗಿ ಎಎಫ್‌ಪಿ ವರದಿ ಮಾಡಿದೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತು.

ಯುಎಸ್ ಅಥವಾ ಅಮೆರಿಕ ದೊಡ್ಡ ಆರ್ಥಿಕ ದೇಶವಾದ್ದರಿಂದ ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್ ಒಪ್ಪಂದಗಳ ಗುರಿ ತಲುಪಲು ಅದರ ಸಹಭಾಗಿತ್ವ ಅಗತ್ಯವಾಗಿದೆ. ಅದರೆ, ಯುಎಸ್ ಹೊರ ನಡೆದರೆ, ಇತರ ದೇಶಗಳು ಅದನ್ನು ಹಿಂಬಾಲಿಸಬಹುದು. ಈ ಮೂಲಕ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಮಾಡಿದ ಶ್ರಮಗಳು ವ್ಯರ್ಥವಾಗಬಹುದು. ಭಾರತದಂತಹ ರಾಷ್ಟ್ರಗಳು ಸರಿಯಾದ ಆರ್ಥಿಕ ನೆರವು ಸಿಗದೆ ಹವಾಮಾನ ಯೋಜನೆಗಳ ಅನುಷ್ಠಾನಗೊಳಿಸಲು ವಿಫಲವಾಗಬಹುದು. ಈಗ ನಡೆಯುತ್ತಿರುವ COP ಯಂತಹ ಹವಾಮಾನ ಚರ್ಚೆಗಳು ಸ್ಥಗಿತಗೊಳ್ಳಬಹುದು. ಬಹು ಮುಖ್ಯವಾಗಿ ಯುಎಸ್‌ ತಾನು ಹೊರ ಹೋಗುವುದಲ್ಲದೆ ಇತರ ರಾಷ್ಟ್ರಗಳನ್ನು ತನ್ನ ಜೊತೆ ಕರೆದೊಯ್ಯಬಹುದು.

ಒಟ್ಟಿನಲ್ಲಿ, ಟ್ರಂಪ್ ಮರು ಆಯ್ಕೆಯ ಕಾರ್ಮೋಡ ಹವಾಮಾನ ಯೋಜನೆಗಳ ಮೇಲೆ ಆವರಿಸಿದೆ. ಟ್ರಂಪ್ ಆಡಳಿತದ ಹವಾಮಾನ ತಂತ್ರವು ಜನವರಿ 20ರಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರವೇ ಸ್ಪಷ್ಟವಾಗಿ ತಿಳಿಯಲಿದೆ.

ಇದನ್ನೂ ಓದಿ | COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...