HomeಮುಖಪುಟCOP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಮೇಲೆ ಯುಎಸ್‌ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮರು ಆಯ್ಕೆಯಾಗಿರುವ ಕಾರ್ಮೋಡ ಆವರಿಸಿದೆ.

ಮತ್ತೆ ಆಯ್ಕೆಯಾದರೆ ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅದರಂತೆ ನಡೆದುಕೊಳ್ಳುವ ಆತಂಕ ಎದುರಾಗಿದೆ.

ಟ್ರಂಪ್ 2016ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದಾಗ ಯುಎಸ್‌ ಅನ್ನು ಪ್ಯಾರಿಸ್ ಒಪ್ಪಂದದಿಂದ ಹೊರಗಿಟ್ಟಿದ್ದರು. ನಾಲ್ಕು ವರ್ಷಗಳ ನಂತರ ಜೋ ಬೈಡೆನ್ ಮತ್ತೆ ಒಪ್ಪಂದದಲ್ಲಿ ಯುಎಸ್‌ ಅನ್ನು ಸೇರಿಸಿದ್ದರು. ಈಗ ಎರಡನೇ ಬಾರಿ ಯುಎಸ್‌ ಅನ್ನು ಟ್ರಂಪ್ ಹೊರಗಿಡುವ ಸಾಧ್ಯತೆ ಇದೆ.

ಈ ಬಾರಿಯ ಹವಾಮಾನ ಶೃಂಗಸಭೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಪಳೆಯುಳಿಕೆ ಇಂಧನಗಳ ಬಳಕೆ ಕಡಿತಗೊಳಿಸುವುದು ಸೇರಿದಂತೆ ತಾಪಮಾನ ಹೆಚ್ಚಳ ನಿಯಂತ್ರಣ ಕ್ರಮಗಳಿಗೆ ಹಣಕಾಸಿನ ನೆರವು (COP FInance) ಒದಗಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಯುತ್ತಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್, ಈ ಎರಡು ಒಪ್ಪಂದಗಳ ಮುಖ್ಯ ಗುರಿ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹವಾಮಾನ ಯೋಜನೆಗಳ ಅನುಷ್ಠಾನಕ್ಕೆ ಮುಂದುವರಿದ ರಾಷ್ಟ್ರಗಳು ಆರ್ಥಿಕ ನೆರವು ಒದಗಿಸುವುದು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿವೆ. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ಹೊಂದಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ಬಾಕುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುಎಸ್‌ನ ಉನ್ನತ ಹವಾಮಾನ ರಾಯಭಾರಿ ಜಾನ್ ಪೊಡೆಸ್ಟಾ ಅವರು “ಟ್ರಂಪ್ ಸರ್ಕಾರ ಹವಾಮಾನ ಕ್ರಮಗಳು ಅಥವಾ ಪ್ಯಾರಿಸ್ ಒಪ್ಪಂದದ ವಿಚಾರದಲ್ಲಿ ಯೂ-ಟರ್ನ್‌ ಹೊಡೆಯಬಹುದು ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಯುಎಸ್‌ನ ನಗರಗಳು, ರಾಜ್ಯಗಳು ಮತ್ತು ಜನರು ಜಾಗತಿಕ ತಾಪಮಾನ ತಗ್ಗಿಸುವ ವಿಚಾರದಲ್ಲಿ ಬದ್ದತೆಯ ಪ್ರಯತ್ನ ಮುಂದುವರೆಸಲಿದ್ದಾರೆ” ಎಂದು ಹೇಳಿದ್ದಾಗಿ ಎಎಫ್‌ಪಿ ವರದಿ ಮಾಡಿದೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತು.

ಯುಎಸ್ ಅಥವಾ ಅಮೆರಿಕ ದೊಡ್ಡ ಆರ್ಥಿಕ ದೇಶವಾದ್ದರಿಂದ ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್ ಒಪ್ಪಂದಗಳ ಗುರಿ ತಲುಪಲು ಅದರ ಸಹಭಾಗಿತ್ವ ಅಗತ್ಯವಾಗಿದೆ. ಅದರೆ, ಯುಎಸ್ ಹೊರ ನಡೆದರೆ, ಇತರ ದೇಶಗಳು ಅದನ್ನು ಹಿಂಬಾಲಿಸಬಹುದು. ಈ ಮೂಲಕ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಮಾಡಿದ ಶ್ರಮಗಳು ವ್ಯರ್ಥವಾಗಬಹುದು. ಭಾರತದಂತಹ ರಾಷ್ಟ್ರಗಳು ಸರಿಯಾದ ಆರ್ಥಿಕ ನೆರವು ಸಿಗದೆ ಹವಾಮಾನ ಯೋಜನೆಗಳ ಅನುಷ್ಠಾನಗೊಳಿಸಲು ವಿಫಲವಾಗಬಹುದು. ಈಗ ನಡೆಯುತ್ತಿರುವ COP ಯಂತಹ ಹವಾಮಾನ ಚರ್ಚೆಗಳು ಸ್ಥಗಿತಗೊಳ್ಳಬಹುದು. ಬಹು ಮುಖ್ಯವಾಗಿ ಯುಎಸ್‌ ತಾನು ಹೊರ ಹೋಗುವುದಲ್ಲದೆ ಇತರ ರಾಷ್ಟ್ರಗಳನ್ನು ತನ್ನ ಜೊತೆ ಕರೆದೊಯ್ಯಬಹುದು.

ಒಟ್ಟಿನಲ್ಲಿ, ಟ್ರಂಪ್ ಮರು ಆಯ್ಕೆಯ ಕಾರ್ಮೋಡ ಹವಾಮಾನ ಯೋಜನೆಗಳ ಮೇಲೆ ಆವರಿಸಿದೆ. ಟ್ರಂಪ್ ಆಡಳಿತದ ಹವಾಮಾನ ತಂತ್ರವು ಜನವರಿ 20ರಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರವೇ ಸ್ಪಷ್ಟವಾಗಿ ತಿಳಿಯಲಿದೆ.

ಇದನ್ನೂ ಓದಿ | COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...