HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...