HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...