HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...