HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...