HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...