HomeಮುಖಪುಟCOP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಹೆಸರಿಸಲಾಗಿದೆ. ಈ ಮೂಲಕ ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ಹವಾಮಾನ ಬದಲಾವಣೆಯ ನಿಯಂತ್ರಣಕ್ಕೆ ಟ್ರಿಲಿಯನ್ ಡಾಲರ್ ಹಣ ಸಂಗ್ರಹಿಸುವುದು. ಅದನ್ನು ಅಭಿವೃದ್ದಿ ಹೊಂದುತ್ತಿರುವ ಮತ್ತು ಹಿಂದುಳಿದಿರುವ ರಾಷ್ಟ್ರಗಳಿಗೆ ಹವಾಮಾನ ಬಿಕ್ಕಟ್ಟು ಪರಿಹರಿಸಲು ನೀಡುವುದು ಈ ಬಾರಿಯ ಶೃಂಗಸಭೆಯ ಮುಖ್ಯ ಚರ್ಚೆಯಾಗಿದೆ.

ಈ ವಿಚಾರವೇ ವಿವಿಧ ದೇಶಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಒಂದೊಂದು ರಾಷ್ಟ್ರಗಳು ಒಂದೊಂದು ರೀತಿಯ ಅಭಿಪ್ರಾಯಗಳ ಪಟ್ಟು ಹಿಡಿದಿರುವುದರಿಂದ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದ ಈ ವರ್ಷ ಕೊನೆಗೊಳ್ಳಲಿದೆ. ಆದರೆ, ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ, ಇನ್ನೂ ಹೆಚ್ಚಿನ ನೆರವನ್ನು ನೀಡುವ ಒಪ್ಪಂದ ಮಾಡಿಕೊಳ್ಳಬೇಕು ಎಂಬುವುದು ಕೆಲ ರಾಷ್ಟ್ರಗಳ ವಾದ.

ಶ್ರೀಮಂತ ರಾಷ್ಟ್ರಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚಿನ ಮೊತ್ತವನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜಗತ್ತಿನ ದೊಡ್ಡಣ್ಣ ಎಣಿಸಿರುವ ಯುಎಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾಗಿರುವುದು ಹೆಚ್ಚಿನ ಮೊತ್ತ ಸಂಗ್ರಹಿಸಿರುವ ವಿಷಯದಲ್ಲಿ ಹಿನ್ನಡೆಗೆ ಕಾರಣವಾಗಬಹುದು.

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಆಡಳಿತವು, ಯುಎಸ್‌ನಿಂದ ನೀಡಲಾಗುವ ಹವಾಮಾನ ಹಣಕಾಸು ನೆರವು ನಿಲ್ಲಿಸಬಹುದು. ಇದು ಒಟ್ಟಾರೆ ಗುರಿಯನ್ನು ಸಂಭಾವ್ಯವಾಗಿ ಕುಗ್ಗಿಸಬಹುದು.

ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ನಿಧಿ ಸಂಗ್ರಹದಲ್ಲಿ ಗಣನೀಯ ಹೆಚ್ಚಳಕ್ಕೆ ಒತ್ತಾಯಿಸುತ್ತಿವೆ. ಕೆಲ ರಾಷ್ಟ್ರಗಳು ವಾರ್ಷಿಕ 1 ಟ್ರಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಸಂಗ್ರಹಕ್ಕೆ ಕರೆ ಕೊಟ್ಟಿವೆ.

ಅರಬ್ ರಾಷ್ಟ್ರಗಳು 1.1 ಟ್ರಿಲಿಯನ್ ವಾರ್ಷಿಕ ಗುರಿಯನ್ನು ಪ್ರಸ್ತಾಪಿಸಿವೆ. ಇದರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ 441 ಶತಕೋಟಿ ನೇರ ಅನುದಾನ ಒಳಗೊಂಡಿದೆ. ಭಾರತ, ಆಫ್ರಿಕನ್ ದೇಶಗಳು ಮತ್ತು ಸಣ್ಣ ದ್ವೀಪ ರಾಷ್ಟ್ರಗಳು ಇದೇ ರೀತಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿದೆ. ಹವಾಮಾನ ಕ್ರಮದ ತುರ್ತು ಅಗತ್ಯವನ್ನು ಒತ್ತಿ ಹೇಳಿವೆ.

ಯಾವ ದೇಶಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂಬುವುದರ ಕುರಿತ ಭಿನ್ನಾಭಿಪ್ರಾಯಗಳು ಮಾತುಕತೆ ಸವಾಲುಗಳಾಗಿ ಪರಿಣಮಿಸಿದೆ.

ಸಾಂಪ್ರದಾಯಿಕವಾಗಿ ಶ್ರೀಮಂತ ರಾಷ್ಟ್ರಗಳು ನೆರವು ನೀಡುವ ಭಾಧ್ಯತೆ ಹೊಂದಿವೆ. ಆದರೆ, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಾದರೂ, ಚೀನಾ ಮತ್ತು ಗಲ್ಫ್ ತೈಲ ರಾಷ್ಟ್ರಗಳು ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಕಾರಣ, ಅವುಗಳೂ ನೆರವು ನೀಡಬೇಕು ಎಂಬ ಬೇಡಿಕೆಯಿದೆ. ಆದರೆ, ಇದನ್ನು ಚೀನಾ ವಿರೋಧಿಸಿದೆ. ತನ್ನನ್ನು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರ ಎಂದೇ ಹೇಳಿಕೊಂಡಿದೆ.

COP29ರ ಹಣಕಾಸು ಮಾತುಕತೆಗಳ ಫಲಿತಾಂಶವು ನಿರ್ಣಾಯಕವಾಗಿದೆ. ಏಕೆಂದರೆ ಇದು ಮಹತ್ವಾಕಾಂಕ್ಷೆಯ ಹವಾಮಾನ ಯೋಜನೆಗಳನ್ನು ಕಾರ್ಯಗತಗೊಳಿಸುವ ದೇಶಗಳ ಸಾಮರ್ಥ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು ಯಎನ್‌ ಹವಾಮಾನ ಯೋಜನೆಗಳ ಗುರಿಯಾಗಿದೆ. ಈ ಗಡುವು ಸಮೀಪಿಸುತ್ತಿದೆ. ಹೀಗಿರುವಾಗ ಸರಿಯಾದ ನೆರವು ಸಿಗದಿದ್ದರೆ ಆರ್ಥಿಕ ಕಾರಣಕ್ಕೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಹಿಂದುಳಿಯಬಹುದು.

ಶೃಂಗಸಭೆ ಮುಂದುವರೆಯುತ್ತಿದೆ. ಅದು ಅಂತ್ಯಗೊಳ್ಳುವ ಮುನ್ನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅವರಿಂದ ನೆರವು ಪಡೆಯುವುದು ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳಿಗೆ ನೆರವು ನೀಡುವುದು ಈ ಎರಡು ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಬೇಕಿದೆ.

ಇದನ್ನೂ ಓದಿ : COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...