Homeಕರ್ನಾಟಕಹಿರೇಕೆರೂರು ಲಾಯರ್‌ ಮೇಲೆ ಪೊಲೀಸರ ಹಲ್ಲೆ; ನ್ಯಾಯವಾದಿಗಳ ಆಕ್ರೋಶ

ಹಿರೇಕೆರೂರು ಲಾಯರ್‌ ಮೇಲೆ ಪೊಲೀಸರ ಹಲ್ಲೆ; ನ್ಯಾಯವಾದಿಗಳ ಆಕ್ರೋಶ

ಪೊಲೀಸರು ನಡೆಸಿರುವ ಹಲ್ಲೆಯ ದೃಶ್ಯವು ದೇವಾಲಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಶಿರಾಳಕೊಪ್ಪ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ ಎಂದು ವಕೀಲರ ಸಂಘ ತಿಳಿಸಿದೆ.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದಾರೆ. ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಮೇಲಾದ ಹಲ್ಲೆಯ ಕುರಿತು ನ್ಯಾಯಾಧೀಶರ ಮುಂದೆ ಸದರಿ ವಕೀಲರು ತಿಳಿಸಿದ್ದಾರೆ. ದೇವಾಲಯದ ದೃಶ್ಯವು ಹಲ್ಲೆಯನ್ನು ದಾಖಲಿಸಿದೆ. ವಕೀಲರು ಯಾವುದೇ ದುವರ್ತನೆ ತೋರಿಲ್ಲ. ಆದರೆ ಸಾರ್ವಜನಿಕ ಮಟ್ಟದಲ್ಲಿ ಪೊಲೀಸರ ದರ್ಪ ಎಷ್ಟರ ಮಟ್ಟಿಗಿರುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಿಂದಾಗಿ ಪೊಲೀಸರು ಸಾಮಾನ್ಯ ಜನರ ಮೇಲೆ ಹೇಗೆ ದೌರ್ಜನ್ಯ ಎಸಗುತ್ತಾರೆಂಬುದು ಸ್ಪಷ್ಟವಾಗಿದೆ. ಹೀಗಾಗಿ ದರ್ಪ ತೋರಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸದರಿ ಪೊಲೀಸರನ್ನು ಅಮಾನತು ಮಾಡಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ವಕೀಲರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...