Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...