Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...