Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...