Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...