Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...