HomeಚಳವಳಿJNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ...

JNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ ಸಾಕ್ಷಿಯಿದೆಯೆಂದ ಆಯಿಷೆ ಘೋಷ್…

- Advertisement -
- Advertisement -

ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಆಯಿಷೆ ಘೋಷ್, ಇತರ 8 ಮಂದಿ ಶಂಕಿತರೆಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ. ಅವರ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.

ಪೊಲೀಸರು ದಾಖಲಿಸಿರುವ ಮೂರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಭಾನುವಾರ ಸಂಜೆ ಮುಸುಕುಧಾರಿ ಗೂಂಡಾಗಳಿಂದ ಥಳಿಸಲ್ಪಟ್ಟ ವಿದ್ಯಾರ್ಥಿ ನಾಯಕಿ ಘೋಷ್, ಮಧ್ಯಾಹ್ನ 3.45 ರ ಸುಮಾರಿಗೆ ಪೆರಿಯಾರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗುಂಪುಗಳ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೆಎನ್‌ಯುನಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಉಪ ಆಯುಕ್ತ ಜಾಯ್ ಟ್ರಿಕಿ, ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವುದರ ಆಧಾರದ ಮೇಲೆ ಇಲ್ಲಿಯವರೆಗೆ ಗುರುತಿಸಲಾಗಿರುವ ಶಂಕಿತರಿಗೆ ನೋಟಿಸ್ ನೀಡುತ್ತೇವೆ ಮತ್ತು ಅವರು ಅಲ್ಲಿಗೆ ಏಕೆ ಹೋದರೆಂದು ವಿವರಣೆ ನೀಡಬೇಕು ಎಂದಿದ್ದಾರೆ.

ಟ್ರಿಕಿ ಒಂಬತ್ತು ಶಂಕಿತರು ಯಾವ ರಾಜಕೀಯ ವಿಭಾಗಕ್ಕೆ ಸೇರಿದ್ದಾರೆ ಎಂಬುದನ್ನು ವಿವರಿಸಿಲ್ಲ. ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘದ ಭಾಗವಾಗಿದ್ದ ಎಡ ಗುಂಪುಗಳಿಗೆ ಸೇರಿದ್ದಾರೆ ಎಂದು ಉಚ್ಚರಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಗೂ, ಶಂಕಿತರಿಗೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲ್ಲ.

ಪೆರಿಯಾರ್‌ ಹಾಸ್ಟೆಲ್‌ನಲ್ಲಿ ಮಧ್ಯಾಹ್ನ 3.45 ರ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ನಂತರ, ಸಂಜೆ 7 ಗಂಟೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಬರಮತಿ ಟಿ-ಪಾಯಿಂಟ್‌ನಲ್ಲಿ ಶಾಂತಿ ಸಭೆ ನಡೆಸುತ್ತಿದ್ದರು. ಆಗ ಜನರ ಗುಂಪೊಂದು ಬಂದು ಮೊದಲು ಈ ಸಭೆಯಲ್ಲಿ ಜನರೊಂದಿಗೆ ವಾಗ್ವಾದಕ್ಕೆ ಇಳಿದು ನಂತರ ಸಬರಮತಿ ಹಾಸ್ಟೆಲ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತು ಎಂದಿದ್ದಾರೆ.

ಪೆರಿಯಾರ್ ಹಾಸ್ಟೆಲ್‌ನಲ್ಲಿ ಹಿಂದಿನ ದಿನ ನಡೆದ ದಾಳಿಯಂತೆ, ಸಬರಮತಿ ಹಾಸ್ಟೆಲ್‌ನಲ್ಲಿ ಈ ಗುಂಪು ನಿರ್ದಿಷ್ಟ ಕೊಠಡಿಗಳನ್ನು ಗುರಿಯಾಗಿಸಿ ಹಲ್ಲೆ ಮಾಡಿದೆ ಎಂದು ಟ್ರಿಕಿ ಹೇಳಿದರು. ಮುಖವಾಡದ ದಾಳಿಕೋರರಲ್ಲಿ ಜೆಎನ್‌ಯು ವಿದ್ಯಾರ್ಥಿಗಳು ಇದ್ದರು ಎಂದಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ತೋರಿಸಲು ಸಾಕ್ಷಿಗಳಿವೆ : ಆಯಿಷೆ ಘೋಷ್

ಕ್ಯಾಂಪಸ್ ದಾಳಿಯ ಶಂಕಿತರಲ್ಲಿ ದೆಹಲಿ ಪೊಲೀಸರು JNUSU ಅಧ್ಯಕ್ಷೆ ಆಯಿಷೆ ಘೋಷ್ ಅವರ ಹೆಸರು ಪ್ರಸ್ತಾಪಿಸಿದ ಕೆಲವೇ ಕ್ಷಣಗಳಲ್ಲಿ, ಪತ್ರಿಕಾಗೋಷ್ಠಿ ನಡೆಸಿದ ಆಯಿಷೆ ಘೋಷ್, ನನ್ನ ಮೇಲೆ ಹಲ್ಲೆ ನಡೆದಿರುವುದನ್ನು ತೋರಿಸಲು ತನ್ನ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ.

ಜನವರಿ 5 ರಂದು, ಮುಸುಕುಧಾರಿ ಪುರುಷರು ಮತ್ತು ಮಹಿಳೆಯರು ಜೆಎನ್‌ಯು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದಿದ್ದರು. ಆಗ ತೀವ್ರ ಪೆಟ್ಟು ತಿಂದ ಘೋಷ್ ರಕ್ತ ಸುರಿಸುತ್ತಲೇ ಆಸ್ಪತ್ರೆ ಸೇರಿದ್ದರು.

“ತಾನು ಯಾವುದೇ ಹಲ್ಲೆಯಲ್ಲಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿರುವ ಘೋಷ್, ದೆಹಲಿ ಪೊಲೀಸರು ತಮ್ಮ ವಿಚಾರಣೆ ನಡೆಸಲಿ, ನನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ತೋರಿಸಲು ನನ್ನ ಬಳಿ ಪುರಾವೆಗಳಿವೆ ”ಎಂದು ಹೇಳಿದ್ದಾರೆ.

ಪೊಲೀಸರು ಆಕೆಯ ಹೆಸರನ್ನು ಶಂಕಿತರ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮೊದಲು ಪೊಲೀಸರು ಅದಕ್ಕೆ ಸೂಕ್ತ ದಾಖಲೆಗಳನ್ನು, ವಿಡಿಯೋಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ದುರುದ್ದೇಶಪೂರ್ವಕವಾಗಿ ಪೊಲೀಸರು ನಡೆಸುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ಈ ದೇಶದ ಕಾನೂನು ವ್ಯವಸ್ಥೆ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ, ಅದು ನ್ಯಾಯಯುತವಾಗಿ ತನಿಖೆ ನಡೆಸುತ್ತದೆ ಮತ್ತು ನನಗೆ ನ್ಯಾಯ ಸಿಗುತ್ತದೆ. ಆದರೆ ದೆಹಲಿ ಪೊಲೀಸರು ಏಕೆ ಪಕ್ಷಪಾತವಾಗಿ ವರ್ತಿಸುತ್ತಿದ್ದಾರೆ? ನಾನು ಕೊಟ್ಟ ದೂರಿನಡಿ ಇನ್ನು ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಯಾವುದೇ ಹಲ್ಲೆ ನಡೆಸಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರ ಈ ದಬ್ಬಾಳಿಕೆಗೆ ಹೆದರುವುದಿಲ್ಲ. ವಿದ್ಯಾರ್ಥಿಗಳು ಮುಂದೆಯೂ ಸಹ ಚಳುವಳಿಯನ್ನು ಶಾಂತಿಯುತವಾಗಿ ಮತ್ತು ಪ್ರಜಾಪ್ರಭುತ್ವ ರೀತಿಯಲ್ಲಿ ಮುನ್ನಡೆಸುತ್ತಾರೆ ಎಂದು ಯುವ ನಾಯಕಿ ಆಯಿಷೆ ಘೋಷ್‌ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...