HomeಚಳವಳಿJNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ...

JNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ ಸಾಕ್ಷಿಯಿದೆಯೆಂದ ಆಯಿಷೆ ಘೋಷ್…

- Advertisement -
- Advertisement -

ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಆಯಿಷೆ ಘೋಷ್, ಇತರ 8 ಮಂದಿ ಶಂಕಿತರೆಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ. ಅವರ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.

ಪೊಲೀಸರು ದಾಖಲಿಸಿರುವ ಮೂರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಭಾನುವಾರ ಸಂಜೆ ಮುಸುಕುಧಾರಿ ಗೂಂಡಾಗಳಿಂದ ಥಳಿಸಲ್ಪಟ್ಟ ವಿದ್ಯಾರ್ಥಿ ನಾಯಕಿ ಘೋಷ್, ಮಧ್ಯಾಹ್ನ 3.45 ರ ಸುಮಾರಿಗೆ ಪೆರಿಯಾರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗುಂಪುಗಳ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೆಎನ್‌ಯುನಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಉಪ ಆಯುಕ್ತ ಜಾಯ್ ಟ್ರಿಕಿ, ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವುದರ ಆಧಾರದ ಮೇಲೆ ಇಲ್ಲಿಯವರೆಗೆ ಗುರುತಿಸಲಾಗಿರುವ ಶಂಕಿತರಿಗೆ ನೋಟಿಸ್ ನೀಡುತ್ತೇವೆ ಮತ್ತು ಅವರು ಅಲ್ಲಿಗೆ ಏಕೆ ಹೋದರೆಂದು ವಿವರಣೆ ನೀಡಬೇಕು ಎಂದಿದ್ದಾರೆ.

ಟ್ರಿಕಿ ಒಂಬತ್ತು ಶಂಕಿತರು ಯಾವ ರಾಜಕೀಯ ವಿಭಾಗಕ್ಕೆ ಸೇರಿದ್ದಾರೆ ಎಂಬುದನ್ನು ವಿವರಿಸಿಲ್ಲ. ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘದ ಭಾಗವಾಗಿದ್ದ ಎಡ ಗುಂಪುಗಳಿಗೆ ಸೇರಿದ್ದಾರೆ ಎಂದು ಉಚ್ಚರಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಗೂ, ಶಂಕಿತರಿಗೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲ್ಲ.

ಪೆರಿಯಾರ್‌ ಹಾಸ್ಟೆಲ್‌ನಲ್ಲಿ ಮಧ್ಯಾಹ್ನ 3.45 ರ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ನಂತರ, ಸಂಜೆ 7 ಗಂಟೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಬರಮತಿ ಟಿ-ಪಾಯಿಂಟ್‌ನಲ್ಲಿ ಶಾಂತಿ ಸಭೆ ನಡೆಸುತ್ತಿದ್ದರು. ಆಗ ಜನರ ಗುಂಪೊಂದು ಬಂದು ಮೊದಲು ಈ ಸಭೆಯಲ್ಲಿ ಜನರೊಂದಿಗೆ ವಾಗ್ವಾದಕ್ಕೆ ಇಳಿದು ನಂತರ ಸಬರಮತಿ ಹಾಸ್ಟೆಲ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತು ಎಂದಿದ್ದಾರೆ.

ಪೆರಿಯಾರ್ ಹಾಸ್ಟೆಲ್‌ನಲ್ಲಿ ಹಿಂದಿನ ದಿನ ನಡೆದ ದಾಳಿಯಂತೆ, ಸಬರಮತಿ ಹಾಸ್ಟೆಲ್‌ನಲ್ಲಿ ಈ ಗುಂಪು ನಿರ್ದಿಷ್ಟ ಕೊಠಡಿಗಳನ್ನು ಗುರಿಯಾಗಿಸಿ ಹಲ್ಲೆ ಮಾಡಿದೆ ಎಂದು ಟ್ರಿಕಿ ಹೇಳಿದರು. ಮುಖವಾಡದ ದಾಳಿಕೋರರಲ್ಲಿ ಜೆಎನ್‌ಯು ವಿದ್ಯಾರ್ಥಿಗಳು ಇದ್ದರು ಎಂದಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ತೋರಿಸಲು ಸಾಕ್ಷಿಗಳಿವೆ : ಆಯಿಷೆ ಘೋಷ್

ಕ್ಯಾಂಪಸ್ ದಾಳಿಯ ಶಂಕಿತರಲ್ಲಿ ದೆಹಲಿ ಪೊಲೀಸರು JNUSU ಅಧ್ಯಕ್ಷೆ ಆಯಿಷೆ ಘೋಷ್ ಅವರ ಹೆಸರು ಪ್ರಸ್ತಾಪಿಸಿದ ಕೆಲವೇ ಕ್ಷಣಗಳಲ್ಲಿ, ಪತ್ರಿಕಾಗೋಷ್ಠಿ ನಡೆಸಿದ ಆಯಿಷೆ ಘೋಷ್, ನನ್ನ ಮೇಲೆ ಹಲ್ಲೆ ನಡೆದಿರುವುದನ್ನು ತೋರಿಸಲು ತನ್ನ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ.

ಜನವರಿ 5 ರಂದು, ಮುಸುಕುಧಾರಿ ಪುರುಷರು ಮತ್ತು ಮಹಿಳೆಯರು ಜೆಎನ್‌ಯು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದಿದ್ದರು. ಆಗ ತೀವ್ರ ಪೆಟ್ಟು ತಿಂದ ಘೋಷ್ ರಕ್ತ ಸುರಿಸುತ್ತಲೇ ಆಸ್ಪತ್ರೆ ಸೇರಿದ್ದರು.

“ತಾನು ಯಾವುದೇ ಹಲ್ಲೆಯಲ್ಲಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿರುವ ಘೋಷ್, ದೆಹಲಿ ಪೊಲೀಸರು ತಮ್ಮ ವಿಚಾರಣೆ ನಡೆಸಲಿ, ನನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ತೋರಿಸಲು ನನ್ನ ಬಳಿ ಪುರಾವೆಗಳಿವೆ ”ಎಂದು ಹೇಳಿದ್ದಾರೆ.

ಪೊಲೀಸರು ಆಕೆಯ ಹೆಸರನ್ನು ಶಂಕಿತರ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮೊದಲು ಪೊಲೀಸರು ಅದಕ್ಕೆ ಸೂಕ್ತ ದಾಖಲೆಗಳನ್ನು, ವಿಡಿಯೋಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ದುರುದ್ದೇಶಪೂರ್ವಕವಾಗಿ ಪೊಲೀಸರು ನಡೆಸುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ಈ ದೇಶದ ಕಾನೂನು ವ್ಯವಸ್ಥೆ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ, ಅದು ನ್ಯಾಯಯುತವಾಗಿ ತನಿಖೆ ನಡೆಸುತ್ತದೆ ಮತ್ತು ನನಗೆ ನ್ಯಾಯ ಸಿಗುತ್ತದೆ. ಆದರೆ ದೆಹಲಿ ಪೊಲೀಸರು ಏಕೆ ಪಕ್ಷಪಾತವಾಗಿ ವರ್ತಿಸುತ್ತಿದ್ದಾರೆ? ನಾನು ಕೊಟ್ಟ ದೂರಿನಡಿ ಇನ್ನು ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಯಾವುದೇ ಹಲ್ಲೆ ನಡೆಸಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರ ಈ ದಬ್ಬಾಳಿಕೆಗೆ ಹೆದರುವುದಿಲ್ಲ. ವಿದ್ಯಾರ್ಥಿಗಳು ಮುಂದೆಯೂ ಸಹ ಚಳುವಳಿಯನ್ನು ಶಾಂತಿಯುತವಾಗಿ ಮತ್ತು ಪ್ರಜಾಪ್ರಭುತ್ವ ರೀತಿಯಲ್ಲಿ ಮುನ್ನಡೆಸುತ್ತಾರೆ ಎಂದು ಯುವ ನಾಯಕಿ ಆಯಿಷೆ ಘೋಷ್‌ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...