HomeಚಳವಳಿJNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ...

JNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ ಸಾಕ್ಷಿಯಿದೆಯೆಂದ ಆಯಿಷೆ ಘೋಷ್…

- Advertisement -
- Advertisement -

ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಆಯಿಷೆ ಘೋಷ್, ಇತರ 8 ಮಂದಿ ಶಂಕಿತರೆಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ. ಅವರ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.

ಪೊಲೀಸರು ದಾಖಲಿಸಿರುವ ಮೂರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಭಾನುವಾರ ಸಂಜೆ ಮುಸುಕುಧಾರಿ ಗೂಂಡಾಗಳಿಂದ ಥಳಿಸಲ್ಪಟ್ಟ ವಿದ್ಯಾರ್ಥಿ ನಾಯಕಿ ಘೋಷ್, ಮಧ್ಯಾಹ್ನ 3.45 ರ ಸುಮಾರಿಗೆ ಪೆರಿಯಾರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗುಂಪುಗಳ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೆಎನ್‌ಯುನಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಉಪ ಆಯುಕ್ತ ಜಾಯ್ ಟ್ರಿಕಿ, ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವುದರ ಆಧಾರದ ಮೇಲೆ ಇಲ್ಲಿಯವರೆಗೆ ಗುರುತಿಸಲಾಗಿರುವ ಶಂಕಿತರಿಗೆ ನೋಟಿಸ್ ನೀಡುತ್ತೇವೆ ಮತ್ತು ಅವರು ಅಲ್ಲಿಗೆ ಏಕೆ ಹೋದರೆಂದು ವಿವರಣೆ ನೀಡಬೇಕು ಎಂದಿದ್ದಾರೆ.

ಟ್ರಿಕಿ ಒಂಬತ್ತು ಶಂಕಿತರು ಯಾವ ರಾಜಕೀಯ ವಿಭಾಗಕ್ಕೆ ಸೇರಿದ್ದಾರೆ ಎಂಬುದನ್ನು ವಿವರಿಸಿಲ್ಲ. ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘದ ಭಾಗವಾಗಿದ್ದ ಎಡ ಗುಂಪುಗಳಿಗೆ ಸೇರಿದ್ದಾರೆ ಎಂದು ಉಚ್ಚರಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಗೂ, ಶಂಕಿತರಿಗೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲ್ಲ.

ಪೆರಿಯಾರ್‌ ಹಾಸ್ಟೆಲ್‌ನಲ್ಲಿ ಮಧ್ಯಾಹ್ನ 3.45 ರ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ನಂತರ, ಸಂಜೆ 7 ಗಂಟೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಬರಮತಿ ಟಿ-ಪಾಯಿಂಟ್‌ನಲ್ಲಿ ಶಾಂತಿ ಸಭೆ ನಡೆಸುತ್ತಿದ್ದರು. ಆಗ ಜನರ ಗುಂಪೊಂದು ಬಂದು ಮೊದಲು ಈ ಸಭೆಯಲ್ಲಿ ಜನರೊಂದಿಗೆ ವಾಗ್ವಾದಕ್ಕೆ ಇಳಿದು ನಂತರ ಸಬರಮತಿ ಹಾಸ್ಟೆಲ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತು ಎಂದಿದ್ದಾರೆ.

ಪೆರಿಯಾರ್ ಹಾಸ್ಟೆಲ್‌ನಲ್ಲಿ ಹಿಂದಿನ ದಿನ ನಡೆದ ದಾಳಿಯಂತೆ, ಸಬರಮತಿ ಹಾಸ್ಟೆಲ್‌ನಲ್ಲಿ ಈ ಗುಂಪು ನಿರ್ದಿಷ್ಟ ಕೊಠಡಿಗಳನ್ನು ಗುರಿಯಾಗಿಸಿ ಹಲ್ಲೆ ಮಾಡಿದೆ ಎಂದು ಟ್ರಿಕಿ ಹೇಳಿದರು. ಮುಖವಾಡದ ದಾಳಿಕೋರರಲ್ಲಿ ಜೆಎನ್‌ಯು ವಿದ್ಯಾರ್ಥಿಗಳು ಇದ್ದರು ಎಂದಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ತೋರಿಸಲು ಸಾಕ್ಷಿಗಳಿವೆ : ಆಯಿಷೆ ಘೋಷ್

ಕ್ಯಾಂಪಸ್ ದಾಳಿಯ ಶಂಕಿತರಲ್ಲಿ ದೆಹಲಿ ಪೊಲೀಸರು JNUSU ಅಧ್ಯಕ್ಷೆ ಆಯಿಷೆ ಘೋಷ್ ಅವರ ಹೆಸರು ಪ್ರಸ್ತಾಪಿಸಿದ ಕೆಲವೇ ಕ್ಷಣಗಳಲ್ಲಿ, ಪತ್ರಿಕಾಗೋಷ್ಠಿ ನಡೆಸಿದ ಆಯಿಷೆ ಘೋಷ್, ನನ್ನ ಮೇಲೆ ಹಲ್ಲೆ ನಡೆದಿರುವುದನ್ನು ತೋರಿಸಲು ತನ್ನ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ.

ಜನವರಿ 5 ರಂದು, ಮುಸುಕುಧಾರಿ ಪುರುಷರು ಮತ್ತು ಮಹಿಳೆಯರು ಜೆಎನ್‌ಯು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದಿದ್ದರು. ಆಗ ತೀವ್ರ ಪೆಟ್ಟು ತಿಂದ ಘೋಷ್ ರಕ್ತ ಸುರಿಸುತ್ತಲೇ ಆಸ್ಪತ್ರೆ ಸೇರಿದ್ದರು.

“ತಾನು ಯಾವುದೇ ಹಲ್ಲೆಯಲ್ಲಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿರುವ ಘೋಷ್, ದೆಹಲಿ ಪೊಲೀಸರು ತಮ್ಮ ವಿಚಾರಣೆ ನಡೆಸಲಿ, ನನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ತೋರಿಸಲು ನನ್ನ ಬಳಿ ಪುರಾವೆಗಳಿವೆ ”ಎಂದು ಹೇಳಿದ್ದಾರೆ.

ಪೊಲೀಸರು ಆಕೆಯ ಹೆಸರನ್ನು ಶಂಕಿತರ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮೊದಲು ಪೊಲೀಸರು ಅದಕ್ಕೆ ಸೂಕ್ತ ದಾಖಲೆಗಳನ್ನು, ವಿಡಿಯೋಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ದುರುದ್ದೇಶಪೂರ್ವಕವಾಗಿ ಪೊಲೀಸರು ನಡೆಸುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ಈ ದೇಶದ ಕಾನೂನು ವ್ಯವಸ್ಥೆ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ, ಅದು ನ್ಯಾಯಯುತವಾಗಿ ತನಿಖೆ ನಡೆಸುತ್ತದೆ ಮತ್ತು ನನಗೆ ನ್ಯಾಯ ಸಿಗುತ್ತದೆ. ಆದರೆ ದೆಹಲಿ ಪೊಲೀಸರು ಏಕೆ ಪಕ್ಷಪಾತವಾಗಿ ವರ್ತಿಸುತ್ತಿದ್ದಾರೆ? ನಾನು ಕೊಟ್ಟ ದೂರಿನಡಿ ಇನ್ನು ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಯಾವುದೇ ಹಲ್ಲೆ ನಡೆಸಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರ ಈ ದಬ್ಬಾಳಿಕೆಗೆ ಹೆದರುವುದಿಲ್ಲ. ವಿದ್ಯಾರ್ಥಿಗಳು ಮುಂದೆಯೂ ಸಹ ಚಳುವಳಿಯನ್ನು ಶಾಂತಿಯುತವಾಗಿ ಮತ್ತು ಪ್ರಜಾಪ್ರಭುತ್ವ ರೀತಿಯಲ್ಲಿ ಮುನ್ನಡೆಸುತ್ತಾರೆ ಎಂದು ಯುವ ನಾಯಕಿ ಆಯಿಷೆ ಘೋಷ್‌ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...