HomeಚಳವಳಿJNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ...

JNU ಹಿಂಸೆ: ಆಯಿಷೆ ಘೋಷ್ ಸೇರಿ 9 ಮಂದಿ ಶಂಕಿತರೆಂದ ಪೊಲೀಸರು.. ನನ್ನ ಮೇಲಿನ ಹಲ್ಲೆಗೆ ಸಾಕ್ಷಿಯಿದೆಯೆಂದ ಆಯಿಷೆ ಘೋಷ್…

- Advertisement -
- Advertisement -

ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಆಯಿಷೆ ಘೋಷ್, ಇತರ 8 ಮಂದಿ ಶಂಕಿತರೆಂದು ದೆಹಲಿ ಪೊಲೀಸರು ಗುರುತಿಸಿದ್ದಾರೆ. ಅವರ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.

ಪೊಲೀಸರು ದಾಖಲಿಸಿರುವ ಮೂರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಭಾನುವಾರ ಸಂಜೆ ಮುಸುಕುಧಾರಿ ಗೂಂಡಾಗಳಿಂದ ಥಳಿಸಲ್ಪಟ್ಟ ವಿದ್ಯಾರ್ಥಿ ನಾಯಕಿ ಘೋಷ್, ಮಧ್ಯಾಹ್ನ 3.45 ರ ಸುಮಾರಿಗೆ ಪೆರಿಯಾರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗುಂಪುಗಳ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೆಎನ್‌ಯುನಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಉಪ ಆಯುಕ್ತ ಜಾಯ್ ಟ್ರಿಕಿ, ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವುದರ ಆಧಾರದ ಮೇಲೆ ಇಲ್ಲಿಯವರೆಗೆ ಗುರುತಿಸಲಾಗಿರುವ ಶಂಕಿತರಿಗೆ ನೋಟಿಸ್ ನೀಡುತ್ತೇವೆ ಮತ್ತು ಅವರು ಅಲ್ಲಿಗೆ ಏಕೆ ಹೋದರೆಂದು ವಿವರಣೆ ನೀಡಬೇಕು ಎಂದಿದ್ದಾರೆ.

ಟ್ರಿಕಿ ಒಂಬತ್ತು ಶಂಕಿತರು ಯಾವ ರಾಜಕೀಯ ವಿಭಾಗಕ್ಕೆ ಸೇರಿದ್ದಾರೆ ಎಂಬುದನ್ನು ವಿವರಿಸಿಲ್ಲ. ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘದ ಭಾಗವಾಗಿದ್ದ ಎಡ ಗುಂಪುಗಳಿಗೆ ಸೇರಿದ್ದಾರೆ ಎಂದು ಉಚ್ಚರಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಗೂ, ಶಂಕಿತರಿಗೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲ್ಲ.

ಪೆರಿಯಾರ್‌ ಹಾಸ್ಟೆಲ್‌ನಲ್ಲಿ ಮಧ್ಯಾಹ್ನ 3.45 ರ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ನಂತರ, ಸಂಜೆ 7 ಗಂಟೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಬರಮತಿ ಟಿ-ಪಾಯಿಂಟ್‌ನಲ್ಲಿ ಶಾಂತಿ ಸಭೆ ನಡೆಸುತ್ತಿದ್ದರು. ಆಗ ಜನರ ಗುಂಪೊಂದು ಬಂದು ಮೊದಲು ಈ ಸಭೆಯಲ್ಲಿ ಜನರೊಂದಿಗೆ ವಾಗ್ವಾದಕ್ಕೆ ಇಳಿದು ನಂತರ ಸಬರಮತಿ ಹಾಸ್ಟೆಲ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತು ಎಂದಿದ್ದಾರೆ.

ಪೆರಿಯಾರ್ ಹಾಸ್ಟೆಲ್‌ನಲ್ಲಿ ಹಿಂದಿನ ದಿನ ನಡೆದ ದಾಳಿಯಂತೆ, ಸಬರಮತಿ ಹಾಸ್ಟೆಲ್‌ನಲ್ಲಿ ಈ ಗುಂಪು ನಿರ್ದಿಷ್ಟ ಕೊಠಡಿಗಳನ್ನು ಗುರಿಯಾಗಿಸಿ ಹಲ್ಲೆ ಮಾಡಿದೆ ಎಂದು ಟ್ರಿಕಿ ಹೇಳಿದರು. ಮುಖವಾಡದ ದಾಳಿಕೋರರಲ್ಲಿ ಜೆಎನ್‌ಯು ವಿದ್ಯಾರ್ಥಿಗಳು ಇದ್ದರು ಎಂದಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ತೋರಿಸಲು ಸಾಕ್ಷಿಗಳಿವೆ : ಆಯಿಷೆ ಘೋಷ್

ಕ್ಯಾಂಪಸ್ ದಾಳಿಯ ಶಂಕಿತರಲ್ಲಿ ದೆಹಲಿ ಪೊಲೀಸರು JNUSU ಅಧ್ಯಕ್ಷೆ ಆಯಿಷೆ ಘೋಷ್ ಅವರ ಹೆಸರು ಪ್ರಸ್ತಾಪಿಸಿದ ಕೆಲವೇ ಕ್ಷಣಗಳಲ್ಲಿ, ಪತ್ರಿಕಾಗೋಷ್ಠಿ ನಡೆಸಿದ ಆಯಿಷೆ ಘೋಷ್, ನನ್ನ ಮೇಲೆ ಹಲ್ಲೆ ನಡೆದಿರುವುದನ್ನು ತೋರಿಸಲು ತನ್ನ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ.

ಜನವರಿ 5 ರಂದು, ಮುಸುಕುಧಾರಿ ಪುರುಷರು ಮತ್ತು ಮಹಿಳೆಯರು ಜೆಎನ್‌ಯು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊಡೆದಿದ್ದರು. ಆಗ ತೀವ್ರ ಪೆಟ್ಟು ತಿಂದ ಘೋಷ್ ರಕ್ತ ಸುರಿಸುತ್ತಲೇ ಆಸ್ಪತ್ರೆ ಸೇರಿದ್ದರು.

“ತಾನು ಯಾವುದೇ ಹಲ್ಲೆಯಲ್ಲಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿರುವ ಘೋಷ್, ದೆಹಲಿ ಪೊಲೀಸರು ತಮ್ಮ ವಿಚಾರಣೆ ನಡೆಸಲಿ, ನನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ತೋರಿಸಲು ನನ್ನ ಬಳಿ ಪುರಾವೆಗಳಿವೆ ”ಎಂದು ಹೇಳಿದ್ದಾರೆ.

ಪೊಲೀಸರು ಆಕೆಯ ಹೆಸರನ್ನು ಶಂಕಿತರ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮೊದಲು ಪೊಲೀಸರು ಅದಕ್ಕೆ ಸೂಕ್ತ ದಾಖಲೆಗಳನ್ನು, ವಿಡಿಯೋಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ದುರುದ್ದೇಶಪೂರ್ವಕವಾಗಿ ಪೊಲೀಸರು ನಡೆಸುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ಈ ದೇಶದ ಕಾನೂನು ವ್ಯವಸ್ಥೆ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ, ಅದು ನ್ಯಾಯಯುತವಾಗಿ ತನಿಖೆ ನಡೆಸುತ್ತದೆ ಮತ್ತು ನನಗೆ ನ್ಯಾಯ ಸಿಗುತ್ತದೆ. ಆದರೆ ದೆಹಲಿ ಪೊಲೀಸರು ಏಕೆ ಪಕ್ಷಪಾತವಾಗಿ ವರ್ತಿಸುತ್ತಿದ್ದಾರೆ? ನಾನು ಕೊಟ್ಟ ದೂರಿನಡಿ ಇನ್ನು ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಯಾವುದೇ ಹಲ್ಲೆ ನಡೆಸಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರ ಈ ದಬ್ಬಾಳಿಕೆಗೆ ಹೆದರುವುದಿಲ್ಲ. ವಿದ್ಯಾರ್ಥಿಗಳು ಮುಂದೆಯೂ ಸಹ ಚಳುವಳಿಯನ್ನು ಶಾಂತಿಯುತವಾಗಿ ಮತ್ತು ಪ್ರಜಾಪ್ರಭುತ್ವ ರೀತಿಯಲ್ಲಿ ಮುನ್ನಡೆಸುತ್ತಾರೆ ಎಂದು ಯುವ ನಾಯಕಿ ಆಯಿಷೆ ಘೋಷ್‌ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...