Homeಮುಖಪುಟದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ...

ದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ…

- Advertisement -
- Advertisement -

ದೆಹಲಿಯ ತೀಸ್ ಹಜಾರಿ ಕೋರ್ಟ್ ಪಾರ್ಕಿಂಗ್ ವಿಚಾರದಲ್ಲಿ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಗಲಾಟೆ ತಾರಕಕ್ಕೇರಿದೆ. ಕರ್ತವ್ಯ ನಿರತ ಪೊಲೀಸ್ ಪೇದೆಯನ್ನು, ವಕೀಲರೊಬ್ಬರು ಥಳಿಸಿದ್ದನ್ನು ಖಂಡಿಸಿ, ಪೊಲೀಸರೇ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಇದೇ ಮೊದಲ ಬಾರಿಗೆ ರಕ್ಷಣಾ ಹೊಣೆ  ಹೊತ್ತ ಪೊಲೀಸರೇ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿದ ಪೊಲೀಸರು, ಪೇದೆ ಮೇಲಿನ ಹಲ್ಲೆಯನ್ನು ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದರು. ಕೈಯಲ್ಲಿ ಭಿತ್ತಿಪತ್ರ ಹಿಡಿದುಕೊಂಡಿದ್ದ ಪೊಲೀಸರು, ರಕ್ಷಿಸುವವರನ್ನು ರಕ್ಷಿಸಿ ಎಂದು ಘೋಷಣೆ ಕೂಗಿದರು. ಪ್ರತಿಭಟನಾ ಜಾಥಾ ಹೊರಟು, ಬಿಸಿ ಮುಟ್ಟಿಸಿದರು.

ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಮಾತನಾಡಿ, ಪ್ರತಿಭಟನಾನಿರತ ಪೊಲೀಸರನ್ನು ಸಂತೈಸಿದರು. ನಾವು ಶಿಸ್ತಿನ ಸಿಪಾಯಿಗಳಂತೆ ವರ್ತಿಸಬೇಕು. ಸರ್ಕಾರ ಮತ್ತು ಸಾರ್ವಜನಿಕರು ಕಾನೂನು ಎತ್ತಿ ಹಿಡಿಯುತ್ತೇವೆ, ಕಾನೂನು ರಕ್ಷಣೆ ಮಾಡುತ್ತೇವೆ ಎಂದು ನಂಬಿದ್ದಾರೆ. ಅವರ ನಂಬಿಕೆಯನ್ನು ಉಳಿಸಬೇಕು. ಎಲ್ಲರೂ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಮರಳಿ ಎಂದು ಮನವೊಲಿಸುವ ಪ್ರಯತ್ನ ಮಾಡಿದರು.

ಪೊಲೀಸ್ ಭದ್ರತಾ ಕಾಯ್ದೆ ಅಡಿ 10 ಬೇಡಿಕೆಗಳನ್ನಿಟ್ಟು ಪೊಲೀಸರು ಪ್ರತಿಭಟಿಸಿದರು. ಹಿರಿಯ ಅಧಿಕಾರಿಗಳು, ಕಿರಿಯ ಪೊಲೀಸರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಕಿರಿಯ ಪೊಲೀಸರು, ಹಿರಿಯ ಪೊಲೀಸರ ಮಾತು ಕೇಳುತ್ತಿಲ್ಲ. ನಮ್ಮವರೇ ನಮ್ಮ ಮಾತು ಕೇಳದಿದ್ದರೆ ಇನ್ಯಾರು ಕೇಳುತ್ತಾರೆ ಎಂದು ಹೇಳಿದರು.

ಶನಿವಾರ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ 20 ಪೊಲೀಸರು, 8 ವಕೀಲರು ಗಾಯಗೊಂಡಿದ್ದಾರೆ. 20 ವಾಹನಗಳು ಜಖಂಗೊಂಡಿವೆ.

ಬಿಸಿಐ ಮುಖ್ಯಸ್ಥ ಮನನ್ ಕುಮಾರ್ ಮಿಶ್ರಾ ಮಾತನಾಡಿ, ವಕೀಲರು ತಮ್ಮ ತಮ್ಮ ಕೆಲಸಕ್ಕೆ ಹಾಜರಾಗಬೇಕು. ವಕೀಲರ ಗೂಂಡಾ ವರ್ತನೆ, ವಕೀಲರ ಇಮೇಜ್ ಗೆ ಧಕ್ಕೆ ತಂದಿದೆ ಎಂದರು.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿ, 72 ವರ್ಷಗಳ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸುವಂಥ ಸ್ಥಿತಿ ಎದುರಾಗಿದೆ. ಇದು ಬಿಜೆಪಿಯ ಹೊಸ ಇಂಡಿಯಾ..? ಬಿಜೆಪಿ ದೇಶವನ್ನು ಎತ್ತ ಕೊಂಡೊಯ್ಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಭಾರತೀಯ ಪೊಲೀಸ್ ಸರ್ವೀಸ್ ಟ್ವೀಟ್ ಮಾಡಿದ್ದು, ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆ ಆಕಸ್ಮಿಕ. ಎಲ್ಲವನ್ನೂ ಸಮಾನವಾಗಿ ನೋಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...