Homeಮುಖಪುಟದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ...

ದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ…

- Advertisement -
- Advertisement -

ದೆಹಲಿಯ ತೀಸ್ ಹಜಾರಿ ಕೋರ್ಟ್ ಪಾರ್ಕಿಂಗ್ ವಿಚಾರದಲ್ಲಿ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಗಲಾಟೆ ತಾರಕಕ್ಕೇರಿದೆ. ಕರ್ತವ್ಯ ನಿರತ ಪೊಲೀಸ್ ಪೇದೆಯನ್ನು, ವಕೀಲರೊಬ್ಬರು ಥಳಿಸಿದ್ದನ್ನು ಖಂಡಿಸಿ, ಪೊಲೀಸರೇ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಇದೇ ಮೊದಲ ಬಾರಿಗೆ ರಕ್ಷಣಾ ಹೊಣೆ  ಹೊತ್ತ ಪೊಲೀಸರೇ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿದ ಪೊಲೀಸರು, ಪೇದೆ ಮೇಲಿನ ಹಲ್ಲೆಯನ್ನು ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದರು. ಕೈಯಲ್ಲಿ ಭಿತ್ತಿಪತ್ರ ಹಿಡಿದುಕೊಂಡಿದ್ದ ಪೊಲೀಸರು, ರಕ್ಷಿಸುವವರನ್ನು ರಕ್ಷಿಸಿ ಎಂದು ಘೋಷಣೆ ಕೂಗಿದರು. ಪ್ರತಿಭಟನಾ ಜಾಥಾ ಹೊರಟು, ಬಿಸಿ ಮುಟ್ಟಿಸಿದರು.

ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಮಾತನಾಡಿ, ಪ್ರತಿಭಟನಾನಿರತ ಪೊಲೀಸರನ್ನು ಸಂತೈಸಿದರು. ನಾವು ಶಿಸ್ತಿನ ಸಿಪಾಯಿಗಳಂತೆ ವರ್ತಿಸಬೇಕು. ಸರ್ಕಾರ ಮತ್ತು ಸಾರ್ವಜನಿಕರು ಕಾನೂನು ಎತ್ತಿ ಹಿಡಿಯುತ್ತೇವೆ, ಕಾನೂನು ರಕ್ಷಣೆ ಮಾಡುತ್ತೇವೆ ಎಂದು ನಂಬಿದ್ದಾರೆ. ಅವರ ನಂಬಿಕೆಯನ್ನು ಉಳಿಸಬೇಕು. ಎಲ್ಲರೂ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಮರಳಿ ಎಂದು ಮನವೊಲಿಸುವ ಪ್ರಯತ್ನ ಮಾಡಿದರು.

ಪೊಲೀಸ್ ಭದ್ರತಾ ಕಾಯ್ದೆ ಅಡಿ 10 ಬೇಡಿಕೆಗಳನ್ನಿಟ್ಟು ಪೊಲೀಸರು ಪ್ರತಿಭಟಿಸಿದರು. ಹಿರಿಯ ಅಧಿಕಾರಿಗಳು, ಕಿರಿಯ ಪೊಲೀಸರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಕಿರಿಯ ಪೊಲೀಸರು, ಹಿರಿಯ ಪೊಲೀಸರ ಮಾತು ಕೇಳುತ್ತಿಲ್ಲ. ನಮ್ಮವರೇ ನಮ್ಮ ಮಾತು ಕೇಳದಿದ್ದರೆ ಇನ್ಯಾರು ಕೇಳುತ್ತಾರೆ ಎಂದು ಹೇಳಿದರು.

ಶನಿವಾರ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ 20 ಪೊಲೀಸರು, 8 ವಕೀಲರು ಗಾಯಗೊಂಡಿದ್ದಾರೆ. 20 ವಾಹನಗಳು ಜಖಂಗೊಂಡಿವೆ.

ಬಿಸಿಐ ಮುಖ್ಯಸ್ಥ ಮನನ್ ಕುಮಾರ್ ಮಿಶ್ರಾ ಮಾತನಾಡಿ, ವಕೀಲರು ತಮ್ಮ ತಮ್ಮ ಕೆಲಸಕ್ಕೆ ಹಾಜರಾಗಬೇಕು. ವಕೀಲರ ಗೂಂಡಾ ವರ್ತನೆ, ವಕೀಲರ ಇಮೇಜ್ ಗೆ ಧಕ್ಕೆ ತಂದಿದೆ ಎಂದರು.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿ, 72 ವರ್ಷಗಳ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸುವಂಥ ಸ್ಥಿತಿ ಎದುರಾಗಿದೆ. ಇದು ಬಿಜೆಪಿಯ ಹೊಸ ಇಂಡಿಯಾ..? ಬಿಜೆಪಿ ದೇಶವನ್ನು ಎತ್ತ ಕೊಂಡೊಯ್ಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಭಾರತೀಯ ಪೊಲೀಸ್ ಸರ್ವೀಸ್ ಟ್ವೀಟ್ ಮಾಡಿದ್ದು, ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆ ಆಕಸ್ಮಿಕ. ಎಲ್ಲವನ್ನೂ ಸಮಾನವಾಗಿ ನೋಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...