HomeಮುಖಪುಟN-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

N-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

- Advertisement -
- Advertisement -

N-95 ಮಾಸ್ಕ್‌ಗಳ ಕೊರತೆ ಬಗ್ಗೆ ದನಿಯೆತ್ತಿದ್ದ ಕಾರಣಕ್ಕೆ ಅಮಾನತ್ತಾಗಿದ್ದ ವೈದ್ಯನನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿ, ಆತನ ಕೈ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ದುರ್ಘಟನೆ ಆಂಧ್ರಪ್ರದೇಶದ ವಿಶಾಖಪಟ್ನಂನಲ್ಲಿ ಜರುಗಿದೆ.

ಮುಖ್ಯರಸ್ತೆಯಲ್ಲಿ ನೂರಾರು ಸಾರ್ವಜನಿಕರ ಸಮ್ಮುಖದಲ್ಲಿಯೇ ವೈದ್ಯನ ಬಟ್ಟೆ ಬಿಚ್ಚಿಸಿ, ಕೈಕಟ್ಟಿ ಐದಾರು ಪೊಲೀಸರು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ, ಪೊಲೀಸರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ವೈದ್ಯ ಡಾ.ಸುಧಾಕರ್‌ ಆಗಿದ್ದು, ಅವರು ಮಾರ್ಚ್‌ ತಿಂಗಳಿನಲ್ಲಿ N-95 ಮಾಸ್ಕ್‌ಗಳ ಕೊರತೆಯಿದೆ. ಒಂದು ಮಾಸ್ಕ್‌ ಅನ್ನೇ ಹದಿನೈದು ದಿನಗಳ ಕಾಲ ಬಳಸಬೇಕಾಗಿದೆ ಎಂದು ದೂರಿದ್ದಕ್ಕಾಗಿ ಅವರನ್ನು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿತ್ತು.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾದ, ಹಲ್ಲೆ ನಡೆಸಿದ ಪೊಲೀಸ್‌ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಶಾಖಪಟ್ನಂ ಪೊಲೀಸರ ಈ ಕೃತ್ಯವು ರಾಜಕೀಯ ಬಣ್ಣ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷ ಟಿಡಿಪಿ, ಸಿಪಿಐ ಸೇರಿದಂತೆ ಹಲವು ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ಸಹೋದರರಲ್ಲಿ ಮನವಿ, ನೀವು ಎಷ್ಟು ಮಂದಿ ತಾಲಿ, ಥಾಲಿ ಅಥವಾ ಹೂ ದಳಗಳನ್ನು ನೆನಪಿಸಿಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲ. ಆದರೆ ಅಧಿಕಾರಿಗಳ ನೈಜ ಮುಖವನ್ನು ಬಹಿರಂಗಪಡಿಸುವ ಡಾ.ಸುಧಾಕರ್ ಅವರ ಈ ವೀಡಿಯೊವನ್ನು ಮರೆಯಬೇಡಿ. ಅವರು ನಿಮ್ಮನ್ನು ಗೌರವಿಸುವುದಿಲ್ಲ. ಅವರ ಅಸಮರ್ಥತೆಗಾಗಿ ಬಲಿಪಶು ಮಾಡಲು ನಿಮ್ಮನ್ನು ಬಳಸಿಕೊಳ್ಳುತ್ತಾರೆ ಅಷ್ಟೇ. ನೀವು ನಿರಾಕರಿಸಿದರೆ ಈ ರೀತಿ ನಡೆಸಿಕೊಳ್ಳುತ್ತಾರೆ ಎಂದು ವೈದ್ಯರಾದ ಹರ್ಜಿತ್‌ ಸಿಂಗ್‌ ಭಟ್ಟಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಮಾತನಾಡಿ “ಅಕ್ಕಯ್ಯಪಾಲೇಂ ಬಳಿ ಡಾ.ಸುಧಾಕರ್‌ ಗೊಂದಲದ ವಾತಾವರಣ ಸೃಷ್ಟಿಸಿದ್ದಾರೆ. ಪೊಲೀಸರು ತಡೆಯಲು ಹೋದಾಗ ಅವರ ಮೊಬೈಲ್‌ ಕಿತ್ತು ಬಿಸಾಡಿದ್ದಾರೆ. ಆತ ಮದ್ಯಪಾನ ಮಾಡಿದ್ದು ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ವರ್ತಿಸಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕಿಂಗ್‌ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು” ಹೇಳಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರ ಮೇಲಿನ ಈ ಹಲ್ಲೆ ಕಂಡನಾರ್ಹ. ಈ ಪೊಲೀಸರಿಗೆ ತಕ್ಕ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...