HomeಮುಖಪುಟN-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

N-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

- Advertisement -
- Advertisement -

N-95 ಮಾಸ್ಕ್‌ಗಳ ಕೊರತೆ ಬಗ್ಗೆ ದನಿಯೆತ್ತಿದ್ದ ಕಾರಣಕ್ಕೆ ಅಮಾನತ್ತಾಗಿದ್ದ ವೈದ್ಯನನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿ, ಆತನ ಕೈ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ದುರ್ಘಟನೆ ಆಂಧ್ರಪ್ರದೇಶದ ವಿಶಾಖಪಟ್ನಂನಲ್ಲಿ ಜರುಗಿದೆ.

ಮುಖ್ಯರಸ್ತೆಯಲ್ಲಿ ನೂರಾರು ಸಾರ್ವಜನಿಕರ ಸಮ್ಮುಖದಲ್ಲಿಯೇ ವೈದ್ಯನ ಬಟ್ಟೆ ಬಿಚ್ಚಿಸಿ, ಕೈಕಟ್ಟಿ ಐದಾರು ಪೊಲೀಸರು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ, ಪೊಲೀಸರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ವೈದ್ಯ ಡಾ.ಸುಧಾಕರ್‌ ಆಗಿದ್ದು, ಅವರು ಮಾರ್ಚ್‌ ತಿಂಗಳಿನಲ್ಲಿ N-95 ಮಾಸ್ಕ್‌ಗಳ ಕೊರತೆಯಿದೆ. ಒಂದು ಮಾಸ್ಕ್‌ ಅನ್ನೇ ಹದಿನೈದು ದಿನಗಳ ಕಾಲ ಬಳಸಬೇಕಾಗಿದೆ ಎಂದು ದೂರಿದ್ದಕ್ಕಾಗಿ ಅವರನ್ನು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿತ್ತು.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾದ, ಹಲ್ಲೆ ನಡೆಸಿದ ಪೊಲೀಸ್‌ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಶಾಖಪಟ್ನಂ ಪೊಲೀಸರ ಈ ಕೃತ್ಯವು ರಾಜಕೀಯ ಬಣ್ಣ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷ ಟಿಡಿಪಿ, ಸಿಪಿಐ ಸೇರಿದಂತೆ ಹಲವು ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ಸಹೋದರರಲ್ಲಿ ಮನವಿ, ನೀವು ಎಷ್ಟು ಮಂದಿ ತಾಲಿ, ಥಾಲಿ ಅಥವಾ ಹೂ ದಳಗಳನ್ನು ನೆನಪಿಸಿಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲ. ಆದರೆ ಅಧಿಕಾರಿಗಳ ನೈಜ ಮುಖವನ್ನು ಬಹಿರಂಗಪಡಿಸುವ ಡಾ.ಸುಧಾಕರ್ ಅವರ ಈ ವೀಡಿಯೊವನ್ನು ಮರೆಯಬೇಡಿ. ಅವರು ನಿಮ್ಮನ್ನು ಗೌರವಿಸುವುದಿಲ್ಲ. ಅವರ ಅಸಮರ್ಥತೆಗಾಗಿ ಬಲಿಪಶು ಮಾಡಲು ನಿಮ್ಮನ್ನು ಬಳಸಿಕೊಳ್ಳುತ್ತಾರೆ ಅಷ್ಟೇ. ನೀವು ನಿರಾಕರಿಸಿದರೆ ಈ ರೀತಿ ನಡೆಸಿಕೊಳ್ಳುತ್ತಾರೆ ಎಂದು ವೈದ್ಯರಾದ ಹರ್ಜಿತ್‌ ಸಿಂಗ್‌ ಭಟ್ಟಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಮಾತನಾಡಿ “ಅಕ್ಕಯ್ಯಪಾಲೇಂ ಬಳಿ ಡಾ.ಸುಧಾಕರ್‌ ಗೊಂದಲದ ವಾತಾವರಣ ಸೃಷ್ಟಿಸಿದ್ದಾರೆ. ಪೊಲೀಸರು ತಡೆಯಲು ಹೋದಾಗ ಅವರ ಮೊಬೈಲ್‌ ಕಿತ್ತು ಬಿಸಾಡಿದ್ದಾರೆ. ಆತ ಮದ್ಯಪಾನ ಮಾಡಿದ್ದು ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ವರ್ತಿಸಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕಿಂಗ್‌ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು” ಹೇಳಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರ ಮೇಲಿನ ಈ ಹಲ್ಲೆ ಕಂಡನಾರ್ಹ. ಈ ಪೊಲೀಸರಿಗೆ ತಕ್ಕ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...