HomeಮುಖಪುಟN-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

N-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

- Advertisement -
- Advertisement -

N-95 ಮಾಸ್ಕ್‌ಗಳ ಕೊರತೆ ಬಗ್ಗೆ ದನಿಯೆತ್ತಿದ್ದ ಕಾರಣಕ್ಕೆ ಅಮಾನತ್ತಾಗಿದ್ದ ವೈದ್ಯನನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿ, ಆತನ ಕೈ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ದುರ್ಘಟನೆ ಆಂಧ್ರಪ್ರದೇಶದ ವಿಶಾಖಪಟ್ನಂನಲ್ಲಿ ಜರುಗಿದೆ.

ಮುಖ್ಯರಸ್ತೆಯಲ್ಲಿ ನೂರಾರು ಸಾರ್ವಜನಿಕರ ಸಮ್ಮುಖದಲ್ಲಿಯೇ ವೈದ್ಯನ ಬಟ್ಟೆ ಬಿಚ್ಚಿಸಿ, ಕೈಕಟ್ಟಿ ಐದಾರು ಪೊಲೀಸರು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ, ಪೊಲೀಸರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ವೈದ್ಯ ಡಾ.ಸುಧಾಕರ್‌ ಆಗಿದ್ದು, ಅವರು ಮಾರ್ಚ್‌ ತಿಂಗಳಿನಲ್ಲಿ N-95 ಮಾಸ್ಕ್‌ಗಳ ಕೊರತೆಯಿದೆ. ಒಂದು ಮಾಸ್ಕ್‌ ಅನ್ನೇ ಹದಿನೈದು ದಿನಗಳ ಕಾಲ ಬಳಸಬೇಕಾಗಿದೆ ಎಂದು ದೂರಿದ್ದಕ್ಕಾಗಿ ಅವರನ್ನು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿತ್ತು.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾದ, ಹಲ್ಲೆ ನಡೆಸಿದ ಪೊಲೀಸ್‌ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಶಾಖಪಟ್ನಂ ಪೊಲೀಸರ ಈ ಕೃತ್ಯವು ರಾಜಕೀಯ ಬಣ್ಣ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷ ಟಿಡಿಪಿ, ಸಿಪಿಐ ಸೇರಿದಂತೆ ಹಲವು ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ಸಹೋದರರಲ್ಲಿ ಮನವಿ, ನೀವು ಎಷ್ಟು ಮಂದಿ ತಾಲಿ, ಥಾಲಿ ಅಥವಾ ಹೂ ದಳಗಳನ್ನು ನೆನಪಿಸಿಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲ. ಆದರೆ ಅಧಿಕಾರಿಗಳ ನೈಜ ಮುಖವನ್ನು ಬಹಿರಂಗಪಡಿಸುವ ಡಾ.ಸುಧಾಕರ್ ಅವರ ಈ ವೀಡಿಯೊವನ್ನು ಮರೆಯಬೇಡಿ. ಅವರು ನಿಮ್ಮನ್ನು ಗೌರವಿಸುವುದಿಲ್ಲ. ಅವರ ಅಸಮರ್ಥತೆಗಾಗಿ ಬಲಿಪಶು ಮಾಡಲು ನಿಮ್ಮನ್ನು ಬಳಸಿಕೊಳ್ಳುತ್ತಾರೆ ಅಷ್ಟೇ. ನೀವು ನಿರಾಕರಿಸಿದರೆ ಈ ರೀತಿ ನಡೆಸಿಕೊಳ್ಳುತ್ತಾರೆ ಎಂದು ವೈದ್ಯರಾದ ಹರ್ಜಿತ್‌ ಸಿಂಗ್‌ ಭಟ್ಟಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಮಾತನಾಡಿ “ಅಕ್ಕಯ್ಯಪಾಲೇಂ ಬಳಿ ಡಾ.ಸುಧಾಕರ್‌ ಗೊಂದಲದ ವಾತಾವರಣ ಸೃಷ್ಟಿಸಿದ್ದಾರೆ. ಪೊಲೀಸರು ತಡೆಯಲು ಹೋದಾಗ ಅವರ ಮೊಬೈಲ್‌ ಕಿತ್ತು ಬಿಸಾಡಿದ್ದಾರೆ. ಆತ ಮದ್ಯಪಾನ ಮಾಡಿದ್ದು ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ವರ್ತಿಸಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕಿಂಗ್‌ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು” ಹೇಳಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರ ಮೇಲಿನ ಈ ಹಲ್ಲೆ ಕಂಡನಾರ್ಹ. ಈ ಪೊಲೀಸರಿಗೆ ತಕ್ಕ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...