HomeUncategorizedಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ...

ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ಕೊಟ್ಟು ಬಂಧನದ ಸಂದರ್ಭ ಅನುಸರಿಸಬೇಕಾದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ನಾಲ್ವರು ಪೊಲೀಸರ ಮೇಲಿದೆ. ಈ ಬಗ್ಗೆ ಆರೋಪಿತ ನಾಲ್ವರು ಪೊಲೀಸರು, ಆರೋಪಿಗಳ ಪೃಷ್ಠದ ಮೇಲೆ 3ರಿಂದ 6ಬಾರಿ ಬಡಿಗೆಯಿಂದ ಹೊಡೆಯುವುದು ಸ್ವೀಕಾರಾರ್ಹವಲ್ಲ, ಆದರೂ ಕಸ್ಟಡಿ ಚಿತ್ರಹಿಂಸೆಗೆ ಸಮನಾಗುವುದಿಲ್ಲ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲ, ಪ್ರಕರಣದಲ್ಲಿ ಶಿಕ್ಷೆಯನ್ನು ನೀಡುವ ಬದಲು ಪರಿಹಾರವನ್ನು ಪಾವತಿಸಲು ನಿರ್ದೇಶಿಸಬೇಕು, ಶಿಕ್ಷೆಯು ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು  ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ಮಾಡಿದ್ದಾರೆಂದು ಅ.4 ರಂದು ಪೊಲೀಸರು ಮೂವರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕುರಿತು ಪೋಟೋ ಕೂಡ ವೈರಲ್‌ ಆಗಿತ್ತು. ಪ್ರಕರಣದ ವಿರುದ್ಧ ಸಂತ್ರಸ್ತ ಯುವಕರು ಕೋರ್ಟ್ ಮೊರೆ ಹೋಗಿದ್ದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಅರ್ಜಿದಾರರ ಪೃಷ್ಠದ ಮೇಲೆ ಮೂರರಿಂದ ಆರು ಬಾರಿ ಕೋಲುಗಳ ಮೂಲಕ ಹೊಡೆಯುವುದ ಕಸ್ಟಡಿ ಹಿಂಸೆಗೆ ಸಮವಲ್ಲ, ಅದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು  ನ್ಯಾಯಾಲಯಕ್ಕೆ ಆರೋಪಿತ ಪೊಲೀಸರು ಹೇಳಿದ್ದಾರೆ.

ಇನ್ಸ್ ಪೆಕ್ಟರ್ ಆಗಿರುವ ಪರ್ಮಾರ್ ಜೊತೆಗೆ ಸಬ್‌ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಶಿಕ್ಷೆಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಅನುಮತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆರೋಪಿಗಳಿಗೆ ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸುವುದು ಅವರ ವೃತ್ತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಕೀಲ ಪ್ರಕಾಶ್ ಜಾನಿ ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸರ ಅಹವಾಲುಗಳನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ಅರ್ಜಿದಾರರ ಪ್ರತಿಕ್ರಿಯೆ ಕೇಳಿದ್ದು, ಪ್ರಕರಣದ ಮುಂದಿನ ವಿಚಾರಣೆ ಅ.16 ರಂದು ನಡೆಯಲಿದೆ.

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಕಳೆದ ವಾರ ದೋಷಾರೋಪ ದಾಖಲಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಹೇಳಿತ್ತು.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿತ್ತು.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿತ್ತು.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಉತ್ತರಪ್ರದೇಶ; ಆಸ್ಪತ್ರೆ ಒಳಗೆ ರೋಗಿಗಿಟ್ಟ ಆಹಾರ ತಿನ್ನುತ್ತಿರುವ ನಾಯಿ: ಜಿಲ್ಲಾಸ್ಪತ್ರೆಯ ದುಸ್ಥಿತಿಯ ವಿಡಿಯೋ ವೈರಲ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...