HomeUncategorizedಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ...

ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ಕೊಟ್ಟು ಬಂಧನದ ಸಂದರ್ಭ ಅನುಸರಿಸಬೇಕಾದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ನಾಲ್ವರು ಪೊಲೀಸರ ಮೇಲಿದೆ. ಈ ಬಗ್ಗೆ ಆರೋಪಿತ ನಾಲ್ವರು ಪೊಲೀಸರು, ಆರೋಪಿಗಳ ಪೃಷ್ಠದ ಮೇಲೆ 3ರಿಂದ 6ಬಾರಿ ಬಡಿಗೆಯಿಂದ ಹೊಡೆಯುವುದು ಸ್ವೀಕಾರಾರ್ಹವಲ್ಲ, ಆದರೂ ಕಸ್ಟಡಿ ಚಿತ್ರಹಿಂಸೆಗೆ ಸಮನಾಗುವುದಿಲ್ಲ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲ, ಪ್ರಕರಣದಲ್ಲಿ ಶಿಕ್ಷೆಯನ್ನು ನೀಡುವ ಬದಲು ಪರಿಹಾರವನ್ನು ಪಾವತಿಸಲು ನಿರ್ದೇಶಿಸಬೇಕು, ಶಿಕ್ಷೆಯು ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು  ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ಮಾಡಿದ್ದಾರೆಂದು ಅ.4 ರಂದು ಪೊಲೀಸರು ಮೂವರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕುರಿತು ಪೋಟೋ ಕೂಡ ವೈರಲ್‌ ಆಗಿತ್ತು. ಪ್ರಕರಣದ ವಿರುದ್ಧ ಸಂತ್ರಸ್ತ ಯುವಕರು ಕೋರ್ಟ್ ಮೊರೆ ಹೋಗಿದ್ದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಅರ್ಜಿದಾರರ ಪೃಷ್ಠದ ಮೇಲೆ ಮೂರರಿಂದ ಆರು ಬಾರಿ ಕೋಲುಗಳ ಮೂಲಕ ಹೊಡೆಯುವುದ ಕಸ್ಟಡಿ ಹಿಂಸೆಗೆ ಸಮವಲ್ಲ, ಅದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು  ನ್ಯಾಯಾಲಯಕ್ಕೆ ಆರೋಪಿತ ಪೊಲೀಸರು ಹೇಳಿದ್ದಾರೆ.

ಇನ್ಸ್ ಪೆಕ್ಟರ್ ಆಗಿರುವ ಪರ್ಮಾರ್ ಜೊತೆಗೆ ಸಬ್‌ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಶಿಕ್ಷೆಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಅನುಮತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆರೋಪಿಗಳಿಗೆ ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸುವುದು ಅವರ ವೃತ್ತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಕೀಲ ಪ್ರಕಾಶ್ ಜಾನಿ ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸರ ಅಹವಾಲುಗಳನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ಅರ್ಜಿದಾರರ ಪ್ರತಿಕ್ರಿಯೆ ಕೇಳಿದ್ದು, ಪ್ರಕರಣದ ಮುಂದಿನ ವಿಚಾರಣೆ ಅ.16 ರಂದು ನಡೆಯಲಿದೆ.

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಕಳೆದ ವಾರ ದೋಷಾರೋಪ ದಾಖಲಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಹೇಳಿತ್ತು.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿತ್ತು.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿತ್ತು.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಉತ್ತರಪ್ರದೇಶ; ಆಸ್ಪತ್ರೆ ಒಳಗೆ ರೋಗಿಗಿಟ್ಟ ಆಹಾರ ತಿನ್ನುತ್ತಿರುವ ನಾಯಿ: ಜಿಲ್ಲಾಸ್ಪತ್ರೆಯ ದುಸ್ಥಿತಿಯ ವಿಡಿಯೋ ವೈರಲ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...