HomeUncategorizedಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ...

ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ಕೊಟ್ಟು ಬಂಧನದ ಸಂದರ್ಭ ಅನುಸರಿಸಬೇಕಾದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ನಾಲ್ವರು ಪೊಲೀಸರ ಮೇಲಿದೆ. ಈ ಬಗ್ಗೆ ಆರೋಪಿತ ನಾಲ್ವರು ಪೊಲೀಸರು, ಆರೋಪಿಗಳ ಪೃಷ್ಠದ ಮೇಲೆ 3ರಿಂದ 6ಬಾರಿ ಬಡಿಗೆಯಿಂದ ಹೊಡೆಯುವುದು ಸ್ವೀಕಾರಾರ್ಹವಲ್ಲ, ಆದರೂ ಕಸ್ಟಡಿ ಚಿತ್ರಹಿಂಸೆಗೆ ಸಮನಾಗುವುದಿಲ್ಲ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲ, ಪ್ರಕರಣದಲ್ಲಿ ಶಿಕ್ಷೆಯನ್ನು ನೀಡುವ ಬದಲು ಪರಿಹಾರವನ್ನು ಪಾವತಿಸಲು ನಿರ್ದೇಶಿಸಬೇಕು, ಶಿಕ್ಷೆಯು ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು  ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ಮಾಡಿದ್ದಾರೆಂದು ಅ.4 ರಂದು ಪೊಲೀಸರು ಮೂವರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕುರಿತು ಪೋಟೋ ಕೂಡ ವೈರಲ್‌ ಆಗಿತ್ತು. ಪ್ರಕರಣದ ವಿರುದ್ಧ ಸಂತ್ರಸ್ತ ಯುವಕರು ಕೋರ್ಟ್ ಮೊರೆ ಹೋಗಿದ್ದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಅರ್ಜಿದಾರರ ಪೃಷ್ಠದ ಮೇಲೆ ಮೂರರಿಂದ ಆರು ಬಾರಿ ಕೋಲುಗಳ ಮೂಲಕ ಹೊಡೆಯುವುದ ಕಸ್ಟಡಿ ಹಿಂಸೆಗೆ ಸಮವಲ್ಲ, ಅದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು  ನ್ಯಾಯಾಲಯಕ್ಕೆ ಆರೋಪಿತ ಪೊಲೀಸರು ಹೇಳಿದ್ದಾರೆ.

ಇನ್ಸ್ ಪೆಕ್ಟರ್ ಆಗಿರುವ ಪರ್ಮಾರ್ ಜೊತೆಗೆ ಸಬ್‌ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಶಿಕ್ಷೆಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಅನುಮತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆರೋಪಿಗಳಿಗೆ ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸುವುದು ಅವರ ವೃತ್ತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಕೀಲ ಪ್ರಕಾಶ್ ಜಾನಿ ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸರ ಅಹವಾಲುಗಳನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ಅರ್ಜಿದಾರರ ಪ್ರತಿಕ್ರಿಯೆ ಕೇಳಿದ್ದು, ಪ್ರಕರಣದ ಮುಂದಿನ ವಿಚಾರಣೆ ಅ.16 ರಂದು ನಡೆಯಲಿದೆ.

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಕಳೆದ ವಾರ ದೋಷಾರೋಪ ದಾಖಲಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಹೇಳಿತ್ತು.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿತ್ತು.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿತ್ತು.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಉತ್ತರಪ್ರದೇಶ; ಆಸ್ಪತ್ರೆ ಒಳಗೆ ರೋಗಿಗಿಟ್ಟ ಆಹಾರ ತಿನ್ನುತ್ತಿರುವ ನಾಯಿ: ಜಿಲ್ಲಾಸ್ಪತ್ರೆಯ ದುಸ್ಥಿತಿಯ ವಿಡಿಯೋ ವೈರಲ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...